ನವದೆಹಲಿ: ಲೋಕಸಭೆಯು 3 ಡೀಮ್ಡ್ ಸಂಸ್ಕೃತ ವಿಶ್ವವಿದ್ಯಾಲಯಗಳನ್ನು ಕೇಂದ್ರೀಯ ವಿಶ್ವವಿದ್ಯಾಲಯಗಳನ್ನಾಗಿ ಉನ್ನತೀಕರಿಸುವ ಮಸೂದೆಯನ್ನು ಅಂಗೀಕರಿಸಿದೆ. ಈ ಬಗ್ಗೆ ಮಾತನಾಡಿರುವ ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಲ್ ನಿಶಾಂಕ್ ಅವರು, ಈ ವಿಶ್ವವಿದ್ಯಾಲಯಗಳು ಸಂಸ್ಕೃತದಲ್ಲಿ ಉನ್ನತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಸಹಾಯ ಮಾಡಲಿದೆ ಎಂದಿದ್ದಾರೆ.
“ಈ ಮಸೂದೆಯ ಅಡಿಯಲ್ಲಿ ಮೂರು ಡೀಮ್ಡ್ ಸಂಸ್ಕೃತ ವಿಶ್ವವಿದ್ಯಾನಿಲಯಗಳು ಕೇಂದ್ರೀಯ ವಿಶ್ವವಿದ್ಯಾಲಯಗಳಾಗಿ ಅಪ್ಗ್ರೇಡ್ ಆಗಲಿದೆ” ಎಂದು ಸಚಿವರು ಹೇಳಿದ್ದಾರೆ.
ನವದೆಹಲಿಯಲ್ಲಿರುವ ರಾಷ್ಟ್ರೀಯ ಸಂಸ್ಕೃತ ಸಂಸ್ಥಾನ, ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಸಂಸ್ಕೃತ ವಿದ್ಯಾಪೀಠ ಮತ್ತು ತಿರುಪತಿಯ ರಾಷ್ಟ್ರೀಯ ಸಂಸ್ಕೃತ ವಿದ್ಯಾಪೀಠಗಳು ಈ ಮಸೂದೆಯಡಿಯಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯಗಳಾಗಿ ಉನ್ನತೀಕರಣಗೊಳ್ಳಲಿವೆ.
“ಈ ವಿಶ್ವವಿದ್ಯಾಲಯಗಳು ಸಂಸ್ಕೃತ ಭಾಷೆಯಲ್ಲಿ ಉನ್ನತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಸಹಾಯ ಮಾಡಲಿದೆ. ಮಾತ್ರವಲ್ಲದೇ ಕೇಂದ್ರ ಸರ್ಕಾರವು ಭಾರತದ ಎಲ್ಲಾ ಭಾಷೆಗಳ ಅಭಿವೃದ್ಧಿಗೆ ಮತ್ತು ಉತ್ತೇಜನಕ್ಕೆ”ಎಂದು ಸಚಿವರು ಹೇಳಿದ್ದಾರೆ.
ಗುರುವಾರ ಲೋಕಸಭೆಯು ಈ ಮಸೂದೆಯನ್ನು ಅಂಗೀಕಾರಗೊಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.