ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ‘ರೇಪ್ ಇನ್ ಇಂಡಿಯಾ’ ಎಂಬ ಹೇಳಿಕೆಯನ್ನು ನೀಡಿ ಭಾರತವನ್ನು ಮತ್ತೆ ಅವಮಾನಿಸಿದ್ದಾರೆ. ಇದೀಗ ಅವರ ಹೇಳಿಕೆಗೆ ಭಾರೀ ವಿರೋಧ ಕೇಳಿ ಬಂದಿದೆ.
ಅತ್ಯಾಚಾರವನ್ನು ರಾಜಕೀಯಗೊಳಿಸಿ ಭಾರತವನ್ನು ಅವಮಾನಿಸಿರುವ ರಾಹುಲ್ ಗಾಂಧಿಯವರು ದೇಶದ ಕ್ಷಮಾಯಾಚನೆ ಮಾಡಬೇಕು ಎಂದು ಆಗ್ರಹಿಸಿ ಸಂಸತ್ತಿನಲ್ಲಿ ಬಿಜೆಪಿ ಸಂಸದರು ಭಾರೀ ಗದ್ದಲ ಎಬ್ಬಿಸಿದ್ದಾರೆ.
ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ರಾಹುಲ್ ಗಾಂಧಿಯವರ ವಿರುದ್ಧ ತೀವ್ರ ವಾಗ್ದಾಳಿಯನ್ನು ನಡೆಸಿದ್ದು, “ಎಲ್ಲಾ ಪುರುಷರು ಅತ್ಯಾಚಾರಿಗಳಲ್ಲ. ರಾಹುಲ್ ಅವರ ಹೇಳಿಕೆ ಭಾರತಕ್ಕೆ ಅವಮಾನ. ಅವರಿಗೆ 50 ವರ್ಷವಾಗಿದೆ, ಆದರೂ ಅವರಿಗೆ ತಾನು ನೀಡುತ್ತಿರುವ ಹೇಳಿಕೆ ಅತ್ಯಾಚಾರವನ್ನು ಆಹ್ವಾನಿಸುತ್ತದೆ ಎಂಬ ಪರಿಜ್ಞಾನ ಅವರಿಗೆ ಇಲ್ಲ” ಎಂದಿದ್ದಾರೆ.
“ರಾಹುಲ್ ಗಾಂಧಿ ಅವರು ತನ್ನ ಹೇಳಿಕೆಯನ್ನು ಭಾರತದ ಪ್ರತಿಯೊಂದು ಮಹಿಳೆಯನ್ನು ಅವಮಾನಿಸಿದ್ದಾರೆ” ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ರಾಹುಲ್ ಗಾಂಧಿಯವರು ದೇಶದ ಕ್ಷಮಾಯಾಚನೆ ಮಾಡಬೇಕು ಎಂದು ದೇಶವ್ಯಾಪಿಯಾಗಿ ಭಾರೀ ಆಗ್ರಹಗಳು ಕೇಳಿ ಬರುತ್ತಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.