ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿನ ಎಸ್ಸಿ ಮತ್ತು ಎಸ್ಟಿಗಳಿಗೆ ಇರುವ ಮೀಸಲಾತಿಯನ್ನು ಇನ್ನೂ 10 ವರ್ಷಗಳವರೆಗೆ ವಿಸ್ತರಿಸುವ ಸಂವಿಧಾನ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆ ಗುರುವಾರ ಅಂಗೀಕರಿಸಿದೆ.
ಲೋಕಸಭೆ ಈ ಮಸೂದೆಯನ್ನು ಡಿಸೆಂಬರ್ 10 ರಂದು ಮಸೂದೆಯನ್ನು ಅಂಗೀಕರಿಸಿದೆ.
ಕಳೆದ 70 ವರ್ಷಗಳಿಂದ ನೀಡಲಾಗಿರುವ ಪರಿಶಿಷ್ಟ ಜಾತಿ (ಎಸ್ಸಿ) ಮತ್ತು ಪರಿಶಿಷ್ಟ ಪಂಗಡದ (ಎಸ್ಟಿ) ಸದಸ್ಯರಿಗೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ನೀಡಲಾಗುತ್ತಿರುವ ಮೀಸಲಾತಿಯು 2020 ರ ಜನವರಿ 25 ರಂದು ಕೊನೆಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಮಸೂದೆಯನ್ನು ತಂದು ಮೀಸಲಾತಿಯನ್ನು ಮತ್ತೆ ಹತ್ತು ವರ್ಷಗಳ ಕಾಲ ವಿಸ್ತರಣೆ ಮಾಡಲಾಗುತ್ತಿದೆ.
ಖಜಾನೆ ಮತ್ತು ವಿರೋಧ ಪಕ್ಷಗಳ ನಡುವೆ ಭಾರೀ ಚರ್ಚೆ ವಿನಿಮಯ ಕಂಡ ಮಸೂದೆಗೆ ರಾಜ್ಯಸಭೆಯಲ್ಲಿ ಸರ್ವಾನುಮತದಿಂದ ಅನುಮೋದನೆ ನೀಡಲಾಯಿತು.
ಮಸೂದೆ ಕುರಿತ ಚರ್ಚೆಗೆ ಉತ್ತರಿಸಿದ ಕಾನೂನು ಸಚಿವ ರವಿಶಂಕರ್ ಪ್ರಸಾದ್, “ಮೋದಿ ಸರ್ಕಾರವು ಮೀಸಲಾತಿಯನ್ನು ಕೊನೆಗೊಳಿಸುವುದಿಲ್ಲ ಮತ್ತು ಸಂವಿಧಾನದ ಮನೋಭಾವಕ್ಕೆ ವಿರುದ್ಧವಾದ ಏನನ್ನೂ ಮಾಡುವುದಿಲ್ಲ” ಎಂದು ಸದನಕ್ಕೆ ಭರವಸೆ ನೀಡಿದರು.
ಈ ಚರ್ಚೆಯು ಪ್ರಸಾದ್ ಮತ್ತು ಪ್ರತಿಪಕ್ಷದ ನಾಯಕ ಗುಲಾಮ್ ನಬಿ ಆಜಾದ್ ನಡುವೆ ಬಿಸಿ ಚರ್ಚೆಗೆ ಸಾಕ್ಷಿಯಾಯಿತು, ನಂತರ ಕಾಂಗ್ರೆಸ್ ಸದಸ್ಯರು ಸದನದಿಂದ ಹೊರನಡೆದರು.
ಬಳಿಕ ಮತದಾನ ಪ್ರಕ್ರಿಯೆಗಾಗಿ ಕಾಂಗ್ರೆಸ್ ಸದಸ್ಯರು ನಂತರ ಸದನಕ್ಕೆ ಮರಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.