ನವದೆಹಲಿ: ದೇಶದಲ್ಲಿ ಅಕ್ರಮ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಪ್ರಸರಣವನ್ನು ನಿಯಂತ್ರಿಸುವಲ್ಲಿ ಸರ್ಕಾರಕ್ಕೆ ಸಹಾಯ ಮಾಡುವ ಮಸೂದೆಯನ್ನು ಸಂಸತ್ತು ಈ ವಾರದ ಆರಂಭದಲ್ಲಿ ಅನುಮೋದಿಸಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇದೀಗ ಮಸೂದೆಗೆ ಅಂಕಿತವನ್ನು ಹಾಕಿದ್ದಾರೆ. ಈ ಮೂಲಕ ಹೊಸ ಶಸ್ತ್ರಾಸ್ತ್ರ (ತಿದ್ದುಪಡಿ) ಕಾಯ್ದೆಯಾಗಿ ಅನುಷ್ಠಾನಕ್ಕೆ ಬಂದಿದೆ.
ಶಸ್ತ್ರಾಸ್ತ್ರ ಪರವಾನಗಿಯ ಅವಧಿಯನ್ನು ಮೂರು ವರ್ಷದಿಂದ ಐದು ವರ್ಷಗಳವರೆಗೆ ಹೆಚ್ಚಿಸಲು ಮತ್ತು ಶಸ್ತ್ರಾಸ್ತ್ರ ಪರವಾನಗಿಯನ್ನು ಅದರ ಎಲೆಕ್ಟ್ರಾನಿಕ್ ರೂಪದಲ್ಲಿ ವಿತರಿಸಲು ಮತ್ತು ಬಂದೂಕುಗಳ ಬಳಕೆಗೆ ಪರವಾನಗಿ ನೀಡುವ ಕಾರ್ಯವಿಧಾನಗಳನ್ನು ತರ್ಕಬದ್ಧಗೊಳಿಸಲು ಮತ್ತು ಸುಗಮಗೊಳಿಸಲು ಈ ಕಾಯ್ದೆಗೆ ಕೋವಿಂದ್ ಶನಿವಾರ ಅನುಮೋದನೆ ನೀಡಿದರು. ವ್ಯಕ್ತಿಗಳು ಅಕ್ರಮ ಬಂದೂಕುಗಳನ್ನು ಬಳಸಿಕೊಂಡು ಮಾಡುವ ಅಪರಾಧಗಳನ್ನು ನಿಗ್ರಹಿಸಲು ಈ ಮಸೂದೆ ಸಹಕಾರಿಯಾಗಲಿದೆ.
ಕಾನೂನು ಉಲ್ಲಂಘನೆಯ ವಿರುದ್ಧ ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳುವ ಉದ್ದೇಶವನ್ನು ಈ ಕಾಯ್ದೆ ಹೊಂದಿದೆ.
ಗೆಜೆಟ್ ಅಧಿಸೂಚನೆಯ ಮೂಲಕ ಕೇಂದ್ರ ಸರ್ಕಾರ ಕಾಯ್ದೆಯನ್ನು ಅನುಷ್ಠಾನಕ್ಕೆ ತಂದಿದೆ.
ಅಕ್ರಮ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡು ಕಳ್ಳಸಾಗಣೆದಾರರಿಗೆ ಕಠಿಣ ಶಿಕ್ಷೆ ವಿಧಿಸುವ ಪ್ರಸ್ತಾಪವನ್ನು ಲೋಕಸಭೆ ಅಂಗೀಕರಿಸಿದ ಒಂದು ದಿನದ ನಂತರ, 2019 ರ ಶಸ್ತ್ರಾಸ್ತ್ರ (ತಿದ್ದುಪಡಿ) ಮಸೂದೆಯನ್ನು ಮಂಗಳವಾರ ರಾಜ್ಯಸಭೆಯಲ್ಲಿ ಅಂಗೀಕರಿಸಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.