ನವದೆಹಲಿ: ಪೌರತ್ವ (ತಿದ್ದುಪಡಿ) ಕಾಯ್ದೆಯ ವಿರುದ್ಧ ವಿವಿಧ ವಿಶ್ವವಿದ್ಯಾಲಯಗಳು ಪ್ರತಿಭಟನೆಯನ್ನು ನಡೆಸುತ್ತಿವೆ. ಪ್ರತಿಭಟನೆ ಹಿಂಸಾ ರೂಪವನ್ನು ಪಡೆದುಕೊಂಡಿವೆ. ವಿದ್ಯಾರ್ಥಿಗಳು ಹದ್ದುಮೀರಿ ವರ್ತಿಸಿ ವಿದ್ಯಾ ದೇಗುಲದ ವಾತಾವರಣವನ್ನೇ ಗಲಭೆಯ ಕೇಂದ್ರವನ್ನಾಗಿಸಿದ್ದಾರೆ. ಎಡ ಪಂಥೀಯ ಧೋರಣೆಯ ವಿದ್ಯಾರ್ಥಿಗಳ ಈ ವರ್ತನೆಗೆ ಸೆಡ್ಡು ಹೊಡೆದು ಕೆಲವು ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು ಪೌರತ್ವ ಕಾಯ್ದೆಗೆ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.
ಪ್ರತಿಷ್ಠಿತ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳು, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ), ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (ಐಐಎಂ) ಮತ್ತು ಇತರ ರಾಷ್ಟ್ರೀಯ ಸಂಸ್ಥೆಗಳ ಸುಮಾರು ಒಂದು ಸಾವಿರ ವಿದ್ಯಾರ್ಥಿಗಳು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಗೆ ಬೆಂಬಲವನ್ನು ನೀಡಿದ್ದಾರೆ. ಅಲ್ಲದೇ, ಜಂಟಿ ಹೇಳಿಕೆಯಲ್ಲಿ ದೇಶಾದಾದ್ಯಂತ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಗಳನ್ನು ಖಂಡಿಸಿದ್ದಾರೆ.
“ಭಾರತದ ಸಂಸತ್ತು ಅಂಗೀಕರಿಸಿದ 2019 ರ ಪೌರತ್ವ (ತಿದ್ದುಪಡಿ) ಕಾಯ್ದೆಗೆ ನಮ್ಮ ಬೆಂಬಲವನ್ನು ನಾವು ಈ ಮೂಲಕ ವ್ಯಕ್ತಪಡಿಸುತ್ತೇವೆ. ಪಟ್ಟಭದ್ರ ಹಿತಾಸಕ್ತಿಗಳು ಒಡ್ಡುತ್ತಿರುವ ಬೆದರಿಕೆ, ಹಿಂಸಾತ್ಮಕ ಮತ್ತು ವಿಭಜಕ ಪ್ರತಿಭಟನೆಗಳಿಂದ ನಾವು ಆಘಾತಕ್ಕೊಳಗಾಗಿದ್ದೇವೆ, ಸಂಕಟಗೊಂಡಿದ್ದೇವೆ ಮತ್ತು ಕೆರಳಿದ್ದೇವೆ. ಈ ಘಟನೆಗಳಿಗೆ ನಮ್ಮ ಖಂಡನೆ ಇದೆ” ಎಂದು ಜಂಟಿ ಹೇಳಿಕೆಯಲ್ಲಿ ತಿಳಿಸಲಾಗಿದೆ.
“ಪೌರತ್ವವು ಕೇಂದ್ರ ವಿಷಯಗಳ ಪಟ್ಟಿಗೆ ಸೇರುವುದರಿಂದ ಸಂಸತ್ತು ಎಲ್ಲಾ ಶಾಸಕಾಂಗ ಸಾಮರ್ಥ್ಯವನ್ನು ಹೊಂದಿದೆ. ಈ ಕಾಯಿದೆಯು 14 ಮತ್ತು 21 ನೇ ವಿಧಿಗಳನ್ನು ಉಲ್ಲಂಘಿಸಿಲ್ಲ ಅಥವಾ ಸಂಸತ್ತಿನ ಶಾಸಕಾಂಗ ಸಾಮರ್ಥ್ಯವನ್ನು ಮೀರಿಲ್ಲ. ಆದ್ದರಿಂದ, ಈ ಕಾಯ್ದೆಯನ್ನು ಅಸಂವಿಧಾನಿಕ ಎಂದು ಲೇಬಲ್ ಮಾಡಲು ಸಾಧ್ಯವಿಲ್ಲ. ಮೂರು ದೇಶಗಳಿಂದ ಹೊಸ ಜನರನ್ನು ಈ ಮಸೂದೆಯು ಆಹ್ವಾನಿಸುವುದಿಲ್ಲ, ಬದಲಿಗೆ ಡಿಸೆಂಬರ್ 31, 2014 ರವರೆಗೆ ದೇಶವನ್ನು ಪ್ರವೇಶಿಸಿದವರನ್ನು ಮಾತ್ರ ನಾಗರಿಕರೆಂದು ಗುರುತಿಸುತ್ತದೆ. ಪೌರತ್ವದ ಮಾನ್ಯತೆ ಹಿಂದಿನ ಆಡಳಿತಗಳಲ್ಲಿಯೂ ಸಂಭವಿಸಿದೆ.” ಎಂದಿದೆ.
ಈ ಮಸೂದೆಯನ್ನು ಡಿಸೆಂಬರ್ 11 ರಂದು ಸಂಸತ್ತು ಅಂಗೀಕರಿಸಿದೆ ಮತ್ತು ಡಿಸೆಂಬರ್ 12 ರಂದು ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆದ ನಂತರ ಇದು ಕಾಯಿದೆಯಾಯಿತು. ಈ ಕಾಯಿದೆಯು 2014 ರ ಡಿಸೆಂಬರ್ 31 ರ ಮೊದಲು ಭಾರತಕ್ಕೆ ಬಂದ ಪಾಕಿಸ್ಥಾನ, ಅಫ್ಘಾನಿಸ್ಥಾನ ಮತ್ತು ಬಾಂಗ್ಲಾದೇಶದ ಕಿರುಕುಳಕ್ಕೊಳಗಾದ ಧಾರ್ಮಿಕ ಅಲ್ಪಸಂಖ್ಯಾತರಿಗೆ ಪೌರತ್ವವನ್ನು ಒದಗಿಸುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.