ಬೆಂಗಳೂರು: ನಿರ್ದಿಷ್ಟ ಪ್ರದೇಶದಲ್ಲಿ ಬೆಳೆದ ಕೃಷಿ ಉತ್ಪಾದನೆಯ ಆಧಾರದ ಮೇಲೆ ಕೈಗಾರಿಕಾ ಸಮೂಹಗಳನ್ನು ಸ್ಥಾಪಿಸುವುದಾಗಿ ಮತ್ತು ಕೃಷಿ ಸಂಬಂಧಿತ ಘಟಕಗಳನ್ನು ಸ್ಥಾಪಿಸುವವರಿಗೆ ಆಕರ್ಷಕ ರಿಯಾಯಿತಿಗಳನ್ನು ನೀಡುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಸೋಮವಾರ ಹೇಳಿದ್ದಾರೆ. ಸಾವಯವ ಕೃಷಿಗೆ ಬದಲಾಯಿಸಿಕೊಳ್ಳುವ ಮೂಲಕ ಕೃಷಿಯಲ್ಲಿ ರಾಸಾಯನಿಕಗಳನ್ನು ಕಡಿಮೆ ಮಾಡಬೇಕು ಎಂದು ರೈತರಿಗೆ ಕರೆ ನೀಡಿದರು.
“ನಾವು ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡುತ್ತಿದ್ದೇವೆ. ವಿಷಕಾರಿ ರಾಸಾಯನಿಕಗಳನ್ನು ಕಡಿಮೆ ಮಾಡಲು, ಬೆಳೆಗಾರರು ಮತ್ತು ಗ್ರಾಹಕರ ಮೇಲೆ ಅದರ ಋಣಾತ್ಮಕ ಪರಿಣಾಮವನ್ನು ಕಡಿಮೆ ಮಾಡಲು ಇದು ಏಕೈಕ ಮಾರ್ಗವಾಗಿದೆ. ಈಗಾಗಲೇ ದೊಡ್ಡ ಪ್ರಮಾಣದಲ್ಲಿ ಈ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಪ್ರತಿ ತಾಲೂಕಿನಲ್ಲಿ ರೈತರೊಂದಿಗೆ ಸಭೆ ನಡೆಸಲು ನಾನು ಯೋಜಿಸುತ್ತಿದ್ದೇನೆ. ಪ್ರತಿ ತಿಂಗಳು ಅದರ ಬಗ್ಗೆ ಜಾಗೃತಿ ಮೂಡಿಸಲು ಬಯಸುತ್ತಿದ್ದೇವೆ”ಎಂದು ಮುಖ್ಯಮಂತ್ರಿ ಹೇಳಿದರು.
ಸಾವಯವ ಕೃಷಿಯ ಕುರಿತು ಶಿವಮೊಗ್ಗದಲ್ಲಿ ಮೆಗಾ ಸಮಾವೇಶ ನಡೆಯುತ್ತಿದೆ ಎಂದು ಯಡಿಯೂರಪ್ಪ ಹೇಳಿದರು. ಅಲ್ಲಿ ಸಾವಿರಾರು ರೈತರು ತಮ್ಮನ್ನು ನೋಂದಾಯಿಸಿಕೊಂಡಿದ್ದಾರೆ. ತಾನು ಮುಖ್ಯಮಂತ್ರಿಯಾಗಿದ್ದಾಗ 2012 ರಲ್ಲಿ 26,000 ಎಕರೆ ಪ್ರದೇಶದಲ್ಲಿ ಸೂಕ್ಷ್ಮ ನೀರಾವರಿ ಯೋಜನೆ ‘ಪ್ರತಿ ಹನಿ, ಹೆಚ್ಚು ಬೆಳೆ’ಗೆ ಚಾಲನೆ ನೀಡಿದ್ದೆ ಎಂದು ಅವರು ನೆನಪಿಸಿಕೊಂಡರು. ಜಾಗತಿಕ ಹಸಿವು ಸೂಚ್ಯಂಕದಲ್ಲಿ 117 ರಾಷ್ಟ್ರಗಳಲ್ಲಿ ಭಾರತ 102 ನೇ ಸ್ಥಾನಕ್ಕೆ ಕುಸಿದಿದೆ ಎಂದು ಯಡಿಯೂರಪ್ಪ ಹೇಳಿದರು ಮತ್ತು ದೇಶದಲ್ಲಿ ವಾರ್ಷಿಕವಾಗಿ 40 ಪ್ರತಿಶತದಷ್ಟು ಆಹಾರ ಧಾನ್ಯಗಳು ತ್ಯಾಜ್ಯವಾಗುತ್ತವೆ ಎಂದು ವಿಷಾದಿಸಿದರು.
“ಜಾಗತಿಕ ಹಸಿವು ಸೂಚ್ಯಂಕ -2019 ರ ಪ್ರಕಾರ, ಭಾರತವು 117 ರಾಷ್ಟ್ರಗಳಲ್ಲಿ 102 ನೇ ಸ್ಥಾನದಲ್ಲಿದೆ. ಒಂದು ಕಡೆ ಜನರು ಹಸಿವಿನಿಂದ ಬಳಲುತ್ತಿದ್ದಾರೆ, ಮತ್ತೊಂದೆಡೆ, ಕೃಷಿ ಉತ್ಪನ್ನಗಳಲ್ಲಿ ಭಾರಿ ಪ್ರಮಾಣದ ವ್ಯರ್ಥವಾಗುತ್ತಿದೆ” ಎಂದು ಅವರು ಹೇಳಿದರು.
ಆಗ್ರೋ ಫುಡ್-ಟೆಕ್ ಎಕ್ಸ್ಪೋ -2020 ಮುಂದಿನ ವರ್ಷ ಏಪ್ರಿಲ್ 22 ರಿಂದ 26 ರವರೆಗೆ ಜರುಗಲಿದೆ ಎಂದು ಅವರು ಹೇಳಿದರು.
ಅರಮನೆ ಮೈದಾನದಲ್ಲಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟ (ಎಫ್ಕೆಸಿಸಿಐ) ಈ ಕಾರ್ಯಕ್ರಮವನ್ನು ಆಯೋಜಿಸಲಿದ್ದು, ಭಾರತದ ವಿವಿಧ ಭಾಗಗಳಿಂದ ಮತ್ತು ವಿದೇಶಗಳಿಂದ ತಜ್ಞರು ಇದರಲ್ಲಿ ಭಾಗವಹಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.