ನವದೆಹಲಿ: ನಿರ್ಭಯಾ ಪ್ರಕರಣದ ಅರ್ಜಿಯನ್ನು ಆಲಿಸುವುದರಿಂದ ಭಾರತದ ಮುಖ್ಯ ನ್ಯಾಯಮೂರ್ತಿ ಎಸ್ಎ ಬೊಬ್ಡೆ ಅವರು ಹೊರಗುಳಿದಿದ್ದಾರೆ. ಸಂತ್ರಸ್ಥೆಯನ್ನು ಪ್ರತಿನಿಧಿಸಿದ ವಕೀಲರಲ್ಲಿ ಒಬ್ಬರು ತಮ್ಮ ಕುಟುಂಬ ಸದಸ್ಯರಾಗಿರುವ ಕಾರಣದಿಂದಾಗಿ ಅವರು ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.
ನಾಳೆ ಬೆಳಿಗ್ಗೆ ಹೊಸ ಪೀಠವು ಪ್ರಕರಣದ ವಿಚಾರಣೆಯನ್ನು ಪ್ರಾರಂಭಿಸಲಿದೆ. 2012ರಲ್ಲಿ ದೆಹಲಿಯಲ್ಲಿ 23 ವರ್ಷದ ಪ್ಯಾರಮೆಡಿಕಲ್ ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಐವರಲ್ಲಿ ಒಬ್ಬನಾದ ಅಕ್ಷಯ್ ಸಿಂಗ್ ಎಂಬಾತ ಮರಣದಂಡನೆಯನ್ನು ಮರುಪರಿಶೀಲಿಸುವಂತೆ ಕೋರಿ ಮರು ಪರಿಶೀಲನಾ ಅರ್ಜಿಯನ್ನು ಹಾಕಿದ್ದ. ಹೆಚ್ಚುತ್ತಿರುವ ವಾಯು ಮಾಲಿನ್ಯದಿಂದಾಗಿ ದೆಹಲಿಯಲ್ಲಿ ಜನರ ಆಯುಷ್ಯ ಕುಗ್ಗಿದೆ, ಹೀಗಿರುವಾಗ ಮರಣದಂಡನೆ ವಿಧಿಸುವ ಅಗತ್ಯವೇನಿದೆ ಎಂದು ಆತ ಈ ಅರ್ಜಿಯಲ್ಲಿ ಪ್ರಶ್ನಿಸಿದ್ದಾನೆ.
ಅಪರಾಧಿಗಳ ಮರು ಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಲಿದೆ ಎಂಬ ವಿಶ್ವಾಸವನ್ನು ನಿರ್ಭಯಾ ತಾಯಿ ವ್ಯಕ್ತಪಡಿಸಿದ್ದಾರೆ. “ನಾವು ಕಳೆದ 7 ವರ್ಷಗಳಿಂದ ಕಾಯುತ್ತಿದ್ದೇವೆ, ಇನ್ನೂ ಒಂದು ದಿನ ಕಾಯುತ್ತೇವೆ. ನಾಳೆ ಪರಿಶೀಲನಾ ಅರ್ಜಿಯನ್ನು ತಿರಸ್ಕರಿಸಲಾಗುತ್ತದೆ ಮತ್ತು ಅವರನ್ನು ಶೀಘ್ರದಲ್ಲೇ ಗಲ್ಲಿಗೇರಿಸಲಾಗುತ್ತದೆ ಎಂಬ ಭರವಸೆ ಇದೆ” ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಕಳೆದ ವರ್ಷ ಜುಲೈನಲ್ಲಿ ಪ್ರಕರಣದ ಇತರ ಮೂವರು ಆರೋಪಿಗಳಾದ ಮುಖೇಶ್, ಪವನ್ ಗುಪ್ತಾ ಮತ್ತು ವಿನಯ್ ಶರ್ಮಾ ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.