ನವದೆಹಲಿ: ಭಾರತದ ಮುಸ್ಲಿಮರಿಗೂ ಪೌರತ್ವ (ತಿದ್ದುಪಡಿ) ಕಾಯ್ದೆಗೂ ಯಾವುದೇ ಸಂಬಂಧವಿಲ್ಲ ಎಂದು ದೆಹಲಿಯ ಜಮಾ ಮಸೀದಿಯ ಶಾಹಿ ಇಮಾಮ್ ಒತ್ತಿ ಹೇಳಿದ್ದಾರೆ. ಅಲ್ಲದೇ, ಪ್ರತಿಭಟನಾಕಾರರು ಹೇಳುತ್ತಿರುವ ಎನ್ ಆರ್ ಸಿ ಅಥವಾ ರಾಷ್ಟ್ರೀಯ ನಾಗರಿಕ ನೋಂದಣಿ ಇನ್ನೂ ಕಾನೂನಾಗಿ ಪರಿವರ್ತನೆಗೊಂಡಿಲ್ಲ ಎಂಬುದನ್ನು ಅವರು ನೆನಪಿಸಿಕೊಟ್ಟಿದ್ದಾರೆ.
“ಪ್ರತಿಭಟನೆ ಮಾಡುವುದು ಭಾರತೀಯ ಜನರ ಪ್ರಜಾಪ್ರಭುತ್ವದ ಹಕ್ಕು, ಅದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ. ಆದರೆ, ನಿಯಂತ್ರಿತವಾಗಿ ಅದನ್ನು ನಡೆಸಬೇಕು. ಭಾವನೆಗಳನ್ನು ನಿಯಂತ್ರಿಸುವುದು ತುಂಬಾ ಮುಖ್ಯವಾಗುತ್ತದೆ” ಎಂದು ಶಾಹಿ ಇಮಾನ್ ಸೈಯದ್ ಅಹ್ಮದ್ ಬುಕಾರಿ ಹೇಳಿದ್ದಾರೆ.
ಭಾರತದಲ್ಲಿ ವಾಸಿಸುತ್ತಿರುವ ಮುಸ್ಲಿಮರಿಗೆ ಈ ಮಸೂದೆಯಿಂದ ಯಾವುದೇ ರೀತಿಯ ಸಮಸ್ಯೆಗಳು ಆಗುವುದಿಲ್ಲ, ಕೇವಲ ಪಾಕಿಸ್ಥಾನ, ಅಫ್ಘಾನಿಸ್ಥಾನ ಮತ್ತು ಬಾಂಗ್ಲಾ ಹಿಂದೂಗಳಿಗೆ ಸಮಸ್ಯೆಯಾಗುತ್ತದೆ ಎಂದಿದ್ದಾರೆ.
ಬುಕಾರಿ ಅವರು ದೇಶದ ಅತೀದೊಡ್ಡ ಜಮಾ ಮಸೀದಿಯ ಉನ್ನತ ಧರ್ಮಗುರುವಾಗಿದ್ದಾರೆ. ಪ್ರತಿಭಟನಾಕಾರರಿಗೆ ಸಂಯಮದಿಂದ ವರ್ತಿಸುವಂತೆ ಅವರು ಕೇಳಿಕೊಂಡಿದ್ದಾರೆ.
ಪೌರತ್ವ ಕಾಯ್ದೆಗೆ ಸಂಬಂಧಿಸಿಂತೆ ಜಾಮಿಯಾ ವಿಶ್ವವಿದ್ಯಾಲಯ ಸೇರಿದಂತೆ ದೇಶದ ಹಲವು ಕಡೆಗಳಲ್ಲಿ ಪ್ರತಿಭಟನೆಗಳು, ಹಿಂಸಾಚಾರಗಳು ನಡೆದಿತ್ತು. ಪ್ರತಿಪಕ್ಷಗಳು ಈ ಪ್ರತಿಭಟನೆಗೆ ಕುಮ್ಮಕ್ಕು ನೀಡುತ್ತಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.