ನವದೆಹಲಿ: ಪೌರತ್ವ ಕಾಯ್ದೆ ಜಾರಿಗೊಂಡ ಹಿನ್ನಲೆಯಲ್ಲಿ ದೇಶದಾದ್ಯಂತ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ. ಆದರೆ 2003ರಲ್ಲಿ ಮಾಜಿ ಪ್ರಧಾನಿ ಮತ್ತು ಆಗಿನ ರಾಜ್ಯಸಭಾ ಪ್ರತಿಪಕ್ಷ ನಾಯಕ ಮನಮೋಹನ್ ಸಿಂಗ್ ಅವರು ಪಾಕಿಸ್ಥಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ಥಾನದ ಅಲ್ಪಸಂಖ್ಯಾತ ನಿರಾಶ್ರಿತರಿಗೆ ಪೌರತ್ವವನ್ನು ನೀಡುವ ಬಗ್ಗೆ ಹೇಳಿದ ಮಾತು ಇಂದು ವೈರಲ್ ಆಗುತ್ತಿದೆ.
ಬಿಜೆಪಿ ಈ ವೀಡಿಯೋವನ್ನು ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ. ಈ ವೀಡಿಯೋದಲ್ಲಿ 2003ರ ಡಿಸೆಂಬರ್ 15 ರಂದು ರಾಜ್ಯಸಭೆಯ ಪ್ರತಿಪಕ್ಷದ ನಾಯಕರಾಗಿದ್ದ ಮನಮೋಹನ್ ಸಿಂಗ್ ಮಾತನಾಡುತ್ತಾ, “ನೆರೆಯ ರಾಷ್ಟ್ರಗಳಾದ ಬಾಂಗ್ಲಾದೇಶ ಮತ್ತು ಪಾಕಿಸ್ಥಾನಗಳಲ್ಲಿ ಧಾರ್ಮಿಕ ಕಿರುಕುಳವನ್ನು ಎದುರಿಸುತ್ತಿರುವ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವಲ್ಲಿ ಉದಾರವಾದಿ ಧೋರಣೆಯನ್ನು ಅನುಸರಿಸಬೇಕು ಎಂದು ನಾನು ಮನವಿ ಮಾಡಿಕೊಳ್ಳುತ್ತೇನೆ” ಎಂದಿದ್ದರು.
ಈ ವೀಡಿಯೋ ಕಾಂಗ್ರೆಸ್ ಪಕ್ಷದ ದ್ವಂದ್ವ ನೀತಿಯನ್ನು ಬಹಿರಂಗಪಡಿಸಿದೆ. ಮನಮೋಹನ್ ಸಿಂಗ್ ಅವರ ಮನವಿಯನ್ನು ಜಾರಿಗೆ ತರುತ್ತಿದ್ದೇವೆ ಎಂದು ಬಿಜೆಪಿ ಹೇಳಿಕೊಂಡಿದೆ.
In 2003, speaking in Rajya Sabha, Dr Manmohan Singh, then Leader of Opposition, asked for a liberal approach to granting citizenship to minorities, who are facing persecution, in neighbouring countries such as Bangladesh and Pakistan. Citizenship Amendment Act does just that… pic.twitter.com/7BOJJMdkKa
— BJP (@BJP4India) December 19, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.