ಲಕ್ನೋ: ಸಿಎಎ ವಿರೋಧಿ ಪ್ರತಿಭಟನೆ ಹೆಸರಲ್ಲಿ ದೊಂಬಿ ನಡೆಸಿದ ಜನರಿಗೆ ಪಾಠ ಕಲಿಸುವ ಕಾರ್ಯವನ್ನು ಯೋಗಿ ಆದಿತ್ಯನಾಥ ಸರ್ಕಾರ ಆರಂಭಿಸಿದೆ. ಉತ್ತರ ಪ್ರದೇಶ ಸರ್ಕಾರವು ಶನಿವಾರ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಗಲಭೆಕೋರರ ಆಸ್ತಿಗಳನ್ನು ಗುರುತಿಸಿ ಮೊಹರು ಹಾಕುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ ಎಂದು ವರದಿಗಳು ತಿಳಿಸಿವೆ.
ಇದಕ್ಕೂ ಮುನ್ನ ಗುರುವಾರ ಯೋಗಿ ಆದಿತ್ಯನಾಥ್ ಅವರು ಪೌರತ್ವ ವಿರೋಧಿ ತಿದ್ದುಪಡಿ ಕಾಯ್ದೆ ವಿರೋಧಿ ದಂಗೆಕೋರರ ವಿರುದ್ಧ ಕಠಿಣ ಕ್ರಮಗಳನ್ನು ಜರುಗಿಸುವುದಾಗಿ ಘೋಷಿಸಿದ್ದರು ಮತ್ತು ಪ್ರತಿ ದಂಗೆಕೋರರ ಆಸ್ತಿಯನ್ನು ವಶಪಡಿಸಿಕೊಳ್ಳುತ್ತೇವೆ ಮತ್ತು ಹಾನಿಗೊಳಗಾದ ಸಾರ್ವಜನಿಕ ಆಸ್ತಿಯನ್ನು ಸರಿಪಡಿಸಲು ಅದರ ಹಣವನ್ನು ಬಳಸುತ್ತೇವೆ ಭರವಸೆ ನೀಡಿದ್ದರು. ಇದೀಗ ಈ ಪ್ರಕ್ರಿಯೆಯನ್ನು ಆರಂಭಿಸಿದ್ದಾರೆ.
ಸಿಕ್ಕ ಸಿಕ್ಕ ಕಡೆಗಳಲ್ಲಿ ಬೆಂಕಿ ಹಚ್ಚಿದ ಗಲಭೆಕೋರರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತಿತ್ತು, ಯೋಗಿ ಅವರು ವೈಯಕ್ತಿಕವಾಗಿ ಈ ಕಾರ್ಯದ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಮತ್ತು ಶೀಘ್ರದಲ್ಲೇ ಉನ್ನತ ಮಟ್ಟದ ಸಭೆ ಕರೆಯಲಿದ್ದಾರೆ ಎಂದು ಮೂಲಗಳು ಬಹಿರಂಗಪಡಿಸಿವೆ.
ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಿದ ಗಲಭೆಕೋರರಿಗೆ ಸೇರಿದ 50 ಅಂಗಡಿಗಳಿಗೆ ಮುಜಫರ್ನಗರ ಆಡಳಿತವು ಮೊಹರು ಹಾಕಿದೆ ಎಂದು ವರದಿಯಾಗಿದೆ.
ಜನಸಮೂಹದ ಹಿಂಸಾಚಾರಕ್ಕೆ ವಿರುದ್ಧವಾಗಿ ಕಾರ್ಯನಿರ್ವಹಿಸಲು ಉದ್ದೇಶಿಸಿರುವ ಈ ಅಭಿಯಾನವು ವೇಗ ಮತ್ತು ಪ್ರಮಾಣದಿಂದಾಗಿ ಮಹತ್ವವನ್ನು ಪಡೆದುಕೊಳ್ಳುತ್ತದೆ. ಗಲಭೆಗಳ ವೀಡಿಯೊಗಳನ್ನು ನೋಡಲು ಮತ್ತು ರಾಜ್ಯ ರಾಜಧಾನಿ ಲಕ್ನೋದಲ್ಲಿ ನಡೆದ ವಿಧ್ವಂಸಕಗಳನ್ನ ಗುರುತಿಸಲು ಯುಪಿ ಸರ್ಕಾರ ಫಲಕವನ್ನು ರಚಿಸಿದೆ ಎಂದು ವರದಿಗಳು ಹೇಳಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.