ಕೋಲ್ಕತ್ತಾ: ಪೌರತ್ವ ತಿದ್ದುಪಡಿ ಕಾಯ್ದೆಯ ಪರವಾಗಿ ಬಿಜೆಪಿ ಸೋಮವಾರ ಕೋಲ್ಕತ್ತಾದಲ್ಲಿ ಬೃಹತ್ ಸಮಾವೇಶವನ್ನು ಆಯೋಜನೆಗೊಳಿಸಿದೆ. ಜನರಿಗೆ ಕಾಯ್ದೆಯ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಈ ಸಮಾವೇಶವನ್ನು ಆಯೋಜಿಸಲಾಗಿದೆ. ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆಪಿ ನಡ್ಡಾ ಅವರು ಇಂದು ಸಮಾವೇಶದಲ್ಲಿ ಭಾಗಿಯಾಗಿದ್ದಾರೆ. ಅಪಾರ ಸಂಖ್ಯೆಯಲ್ಲಿ ಜನರು ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.
ಪಶ್ಚಿಮ ಬಂಗಾಳದ ಬಿಜೆಪಿ ಉಸ್ತುವಾರಿ ಕೈಲಾಶ್ ವಿಜಯವರ್ಗಿಯ ಅವರು ಇಂದು ಬೆಳಿಗ್ಗೆ ಏರೋಡ್ರೋಮ್ನಲ್ಲಿ ನಡ್ಡಾ ಅವರನ್ನು ಸ್ವಾಗತಿಸಿದ್ದಾರೆ. ಶ್ಯಾಂಬಜಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ನಡ್ಡಾ ಮಾತನಾಡಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆಯ ಅನುಷ್ಠಾನದಿಂದ ಜನರು ಪಡೆಯುವ ಪ್ರಯೋಜನಗಳ ಬಗ್ಗೆ ಅವರು ಸಾರ್ವಜನಿಕರಿಗೆ ತಿಳಿಸಿಕೊಟ್ಟಿದ್ದಾರೆ.
ಹಿಂದ್ ಸಿನೆಮಾ-ಸಿಆರ್ ಅವೆನ್ಯುನಿಂದ ಮೆರವಣಿಗೆ ಪ್ರಾರಂಭವಾಯಿತು ಮತ್ತು ಇದು ಶ್ಯಾಂಬಜಾದಲ್ಲಿ ಮುಕ್ತಾಯಗೊಂಡಿದೆ.
ನಡ್ಡಾ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ತೀವ್ರ ವಾಗ್ದಾಳಿಯನ್ನು ನಡೆಸಿದ್ದಾರೆ. ಅಮಿತ್ ಶಾ ಅವರನ್ನು ಕೋಲ್ಕತ್ತಾ ವಿಮಾನನಿಲ್ದಾಣದಿಂದ ಹೊರಗೆ ಬರಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ ಜಮೀಯತ್-ಉಲೆಮಾ-ಎ-ಹಿಂದ್ ನಾಯಕ ಸಿದ್ದಿಕುಲ್ಲಾ ಚೌಧರಿ ವಿರುದ್ಧ ಕ್ರಮಕೈಗೊಳ್ಳಲು ವಿಫಲವಾಗಿರುವುದಕ್ಕೆ ಅವರು ಕಿಡಿಕಾರಿದ್ದಾರೆ.
ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಯಂತನ್ ಬಸು ಅವರು ಮಾತನಾಡಿ, ಪಶ್ಚಿಮಬಂಗಾಳದಲ್ಲಿ ಭಾರತದ ಸಂವಿಧಾನವಲ್ಲ, ಷರಿಯಾ ಕಾನೂನು ಜಾರಿಯಲ್ಲಿದೆ. ಹೀಗಾಗಿ ಗೃಹ ಸಚಿವರಿಗೆ ಬೆದರಿಕೆಯೊಡ್ಡುವ ಧೈರ್ಯವನ್ನು ಚೌಧರಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.