ಕೋಲ್ಕತ್ತಾ: ಪಶ್ಚಿಮ ಬಂಗಾಳ ಸರ್ಕಾರಕ್ಕೆ ದೊಡ್ಡ ಹಿನ್ನಯಾಗಿದೆ, ಕೋಲ್ಕತ್ತಾ ಹೈಕೋರ್ಟ್ ಸೋಮವಾರ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್ಆರ್ಸಿ) ಮತ್ತು ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಹಾಕಲಾಗಿರುವ ಎಲ್ಲಾ ಜಾಹೀರಾತುಗಳನ್ನು ಹಿಂಪಡೆಯಬೇಕು ಎಂದು ಸರ್ಕಾರಕ್ಕೆ ಆದೇಶ ನೀಡಿದೆ.
ಮುಂದಿನ ಆದೇಶದವರೆಗೂ ಜಾಹೀರಾತುಗಳಿಗೆ ನಿಷೇಧ ಹೇರಬೇಕೆಂದು ನ್ಯಾಯಾಲಯ ಆದೇಶಿಸಿದೆ. ಈ ಕುರಿತು ಮುಂದಿನ ವಿಚಾರಣೆ ಜನವರಿ 9 ರಂದು ನಡೆಯಲಿದೆ.
ವರದಿಗಳ ಪ್ರಕಾರ, ಸರ್ಕಾರವು ಸುದ್ದಿ ಚಾನೆಲ್ಗಳಲ್ಲಿ ಜಾಹೀರಾತುಗಳನ್ನು ಪ್ರಸಾರ ಮಾಡುತ್ತಿದೆ, ಅದರಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ವತಃ ಎನ್ಆರ್ಸಿ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ರಾಜ್ಯ ಜಾರಿಗೊಳಿಸುವುದಿಲ್ಲ, ಹೀಗಾಗಿ ಬಂಗಾಳದ ಜನರು ಚಿಂತಿಸಬೇಡಿ ಎಂದು ಹೇಳಿಕೆಯನ್ನು ನೀಡಿದ್ದರು.
ಇದಕ್ಕೂ ಮುನ್ನ ಡಿಸೆಂಬರ್ 15 ರಂದು ಪಶ್ಚಿಮ ಬಂಗಾಳ ರಾಜ್ಯಪಾಲ ಜದ್ಗ್ದೀಪ್ ಧಂಕರ್ ಅವರು ಮಮತಾ ಅವರ ವಿರುದ್ಧ ಕಿಡಿಕಾರಿ, ಎನ್ಆರ್ಸಿ ಮತ್ತು ಸಿಎಎ ವಿರುದ್ಧದ ಜಾಹೀರಾತುಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದ್ದರು. ರಾಜ ಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದ ಧಂಕರ್, “ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್ಆರ್ಸಿ ರಾಜ್ಯದಲ್ಲಿ ಜಾರಿಗೆ ಬರುವುದಿಲ್ಲ ಎಂದು ಹೇಳುವ ಜಾಹೀರಾತುಗಳನ್ನು ಮುಖ್ಯಮಂತ್ರಿ ಹಿಂತೆಗೆದುಕೊಳ್ಳಬೇಕು. ಇವು ಅಸಂವಿಧಾನಿಕ. ಸಾರ್ವಜನಿಕ ನಿಧಿಗಳ ದುರ್ಬಳಕೆ” ಎಂದಿದ್ದರು.
“ಸರ್ಕಾರದ ಚುನಾಯಿತ ಸದಸ್ಯರು ಸಾರ್ವಜನಿಕ ಹಣವನ್ನು ಹೇಗೆ ಬಳಸಿಕೊಳ್ಳಬೇಕು ಎಂಬ ಅರಿವನ್ನು ಇಟ್ಟುಕೊಂಡಿರಬೇಕು. ಜನರ ಹಣವನ್ನು ಎನ್ಆರ್ಸಿ ಮತ್ತು ಸಿಎಎ ಅನುಷ್ಠಾನಗೊಳಿಸುತ್ತಿಲ್ಲ ಎಂದು ಹೇಳಲು ಬಳಕೆ ಮಾಡುವುದು ಸಮಂಜಸವಲ್ಲ. ಇಂತಹ ಕ್ರಮ ಈ ನೆಲದ ಕಾನೂನಿಗೆ ವಿರುದ್ಧವಾಗಿದೆ” ಎಂದಿದ್ದಾರೆ.
ಮಮತಾ ಬ್ಯಾನರ್ಜಿ ಅವರು ಮೊದಲು ತಮ್ಮ ಆಡಳಿತದ ಬಗ್ಗೆ ಹೆಚ್ಚಿನ ಗಮನವನ್ನು ನೀಡಬೇಕು ಎಂದು ಅವರು ಕಿವಿಮಾತು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.