ನವದೆಹಲಿ : ಆರೋಗ್ಯಕರ ಜೀವನಶೈಲಿಯನ್ನು ಉತ್ತೇಜಿಸುವ ಮೂಲಕ, ಆರೋಗ್ಯ ಸೌಲಭ್ಯಗಳನ್ನು ಸುಧಾರಿಸುವ ಮೂಲಕ, ಆರೋಗ್ಯ ಸೇವೆಗಳನ್ನು ಎಲ್ಲರಿಗೂ ಕೈಗೆಟುಕುವಂತೆ ಮಾಡುವ ಮೂಲಕ ಭಾರತವನ್ನು ಆರೋಗ್ಯಕರವಾಗಿಸಲು 2020 – 2030ರ ಮುಂದಿನ ದಶಕವನ್ನು ಮೀಸಲಿಡಬೇಕು ಎಂದು ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಹೇಳಿದ್ದಾರೆ.
ರಾಜಮಂಡ್ರಿಯಲ್ಲಿ ಡೆಲ್ಟಾ ಆಸ್ಪತ್ರೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಜೀವನಶೈಲಿ ಮತ್ತು ಆಹಾರ ಪದ್ಧತಿಗಳಲ್ಲಿನ ಬದಲಾವಣೆಯಿಂದಾಗಿ ಹೆಚ್ಚುತ್ತಿರುವ ಕಾಯಿಲೆಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು, ಆರೋಗ್ಯಕರ ಜೀವನಶೈಲಿ ಅಭ್ಯಾಸಗಳನ್ನು ಅನುಸರಿಸುವ ಅಗತ್ಯವನ್ನು ಒತ್ತಿ ಹೇಳಿದರು.
ವಿಶ್ವ ಆರೋಗ್ಯ ಸಭೆಯ ವರದಿಯನ್ನು ಉಲ್ಲೇಖಿಸಿ ಮಾತನಾಡಿದ ಅವರು, ಭಾರತದಲ್ಲಿ ಸುಮಾರು 61% ಸಾವುಗಳು ಹೃದಯ ಕಾಯಿಲೆಗಳು, ಕ್ಯಾನ್ಸರ್ ಮತ್ತು ಮಧುಮೇಹ ಸೇರಿದಂತೆ ಸಾಂಕ್ರಾಮಿಕವಲ್ಲದ ಕಾಯಿಲೆಗಳಿಂದ ಸಂಭವಿಸುತ್ತದೆ. ಸಾಂಕ್ರಾಮಿಕವಲ್ಲದ ಕಾಯಿಲೆಗಳ ವಿರುದ್ಧ ರಾಷ್ಟ್ರೀಯ ಆಂದೋಲನವನ್ನು ಪ್ರಾರಂಭಿಸಬೇಕು, ಆಸ್ಪತ್ರೆಗಳು, ಭಾರತೀಯ ವೈದ್ಯಕೀಯ ಸಂಘ ಮತ್ತು ವೈದ್ಯಕೀಯ ಜನರು ಜನರಲ್ಲಿ, ವಿಶೇಷವಾಗಿ ಯುವಕರಲ್ಲಿ ಜಾಗೃತಿ ಮೂಡಿಸಲು ಮುಂದಾಗಬೇಕೆಂದು ಅವರು ಆಶಯ ವ್ಯಕ್ತಪಡಿಸಿದರು.
ಅನಾರೋಗ್ಯಕರ ಆಹಾರ ಪದ್ಧತಿ ಮತ್ತು ಜಡ ಜೀವನಶೈಲಿಯಿಂದ ಉಂಟಾಗುವ ಅಪಾಯಗಳ ಬಗ್ಗೆ ಮಕ್ಕಳಲ್ಲಿ ಮತ್ತು ಯುವಕರಲ್ಲಿ ಜಾಗೃತಿ ಮೂಡಿಸುವ ಮಹತ್ವವನ್ನು ತಿಳಿಸಿದ ನಾಯ್ಡು, ಶಾಲೆಗಳಲ್ಲಿರುವ ವಿದ್ಯಾರ್ಥಿಗಳು ಸದೃಢವಾಗಿರಲು ಪ್ರತಿದಿನ ಕನಿಷ್ಠ ಒಂದು ದೈಹಿಕ ಚಟುವಟಿಕೆ ಅಥವಾ ಯೋಗದಲ್ಲಿ ಭಾಗವಹಿಸಲು ಪ್ರೋತ್ಸಾಹಿಸಬೇಕು ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.