ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಪ್ರತಿಪಕ್ಷಗಳು ನಡೆಸುತ್ತಿರುವ ಅಭಿಯಾನಕ್ಕೆ ತಿರುಗೇಟನ್ನು ನೀಡುವ ಸಲುವಾಗಿ, ಬಿಜೆಪಿಯು ಮುಸ್ಲಿಂ ಸಮುದಾಯವನ್ನು ತಲುಪಲು ಜನವರಿ ಮೊದಲ ವಾರದಲ್ಲಿ ರಾಷ್ಟ್ರಮಟ್ಟದ ಸಮಾವೇಶವನ್ನು ಆಯೋಜಿಸಲಿದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ.
ಮುಸ್ಲಿಂ ಸಮುದಾಯದ ಅಭಿಪ್ರಾಯ ಮಂಡಿಸುವವರನ್ನು ಭೇಟಿ ಮಾಡಲು ಮತ್ತು ಅವರನ್ನು ತಲುಪಲು ಪಕ್ಷವು ಕಾರ್ಯಕ್ರಮವನ್ನು ಯೋಜಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಜನವರಿ 5ರಿಂದ ಬಿಜೆಪಿ ಅಭಿಯಾನವನ್ನು ಆರಂಭಿಸಲಿದೆ.
ಇಂದು, ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಯನ್ನು ಗಮನದಲ್ಲಿಟ್ಟುಕೊಂಡು ತಮ್ಮ ನಿವಾಸದಲ್ಲಿ ಸಭೆ ನಡೆಸಿದ್ದಾರೆ.
ನಖ್ವಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ನಾಯಕ ಶಹನವಾಜ್ ಹುಸೇನ್, ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗದ (ಎನ್ಸಿಎಂ) ಅಧ್ಯಕ್ಷ ಘೋರುಲ್ ಹಸನ್ ರಿಜ್ವಿ ಮತ್ತು ಇತರ ನಾಯಕರು ಭಾಗವಹಿಸಿದ್ದರು.
ಡಿಸೆಂಬರ್ 31, 2014 ರ ಮೊದಲು ಭಾರತಕ್ಕೆ ಪ್ರವೇಶಿಸಿದ ಪಾಕಿಸ್ಥಾನ, ಅಫ್ಘಾನಿಸ್ಥಾನ ಮತ್ತು ಬಾಂಗ್ಲಾದೇಶದಿಂದ ಧಾರ್ಮಿಕ ಕಿರುಕುಳವನ್ನು ಅನುಭವಿಸಿ ಪಲಾಯನ ಮಾಡುತ್ತಿರುವ ಹಿಂದೂ, ಕ್ರಿಶ್ಚಿಯನ್, ಸಿಖ್, ಬೌದ್ಧ ಮತ್ತು ಪಾರ್ಸಿ ಸಮುದಾಯಗಳ ನಿರಾಶ್ರಿತರಿಗೆ ಭಾರತೀಯ ಪೌರತ್ವ ನೀಡುವ ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧ ದೇಶಾದ್ಯಂತ ದೊಡ್ಡ ಮಟ್ಟದಲ್ಲಿ ಪ್ರತಿಭಟನೆಗಳು ನಡೆದಿವೆ.
ಪ್ರತಿಪಕ್ಷಗಳ ಹುನ್ನಾರದಿಂದ ನಡೆದ ಈ ಪ್ರತಿಭಟನೆಗೆ ತಿರುಗೇಟು ನೀಡಲು ಬಿಜೆಪಿ ಸಿದ್ಧವಾಗಿದ್ದು, ಇದಕ್ಕಾಗಿ ಜನವರಿ ಮೊದಲ ವಾರದಿಂದಲೇ ಅಭಿಯಾನ ಆರಂಭಿಸಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.