ಉಡುಪಿ: ದೇಶ ಕಂಡ ಮಹಾನ್ ಸಂತ ಉಡುಪಿ ಪೇಜಾವರ ಮಠದ ಸ್ವಾಮೀಜಿ ಶ್ರೀ ವಿಶ್ವೇಶ ತೀರ್ಥರು ಕೃಷ್ಣೈಕ್ಯರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರು ತೀವ್ರಸ್ವರೂಪದ ಅನಾರೋಗ್ಯಕ್ಕೀಡಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಅಗಲಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಶ್ರೀ ವಿಶ್ವೇಶತೀರ್ಥರು ಪೇಜಾವರ ಮಠದ 33ನೇ ಯತಿಗಳಾಗಿದ್ದರು.
ದಕ್ಷಿಣ ಭಾರತದ ಮಹಾನ್ ಸಂತರಲ್ಲಿ ಒಬ್ಬರು ಎಂದು ಕರೆಸಿಕೊಂಡಿದ್ದ ಅವರು, ಹಿಂದೂ ಧರ್ಮದ ಏಳಿಗೆಗಾಗಿ ಸದಾ ಶ್ರಮಿಸಿದವರು.
ಯತಿಗಳ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.
ಟ್ವೀಟ್ ಮಾಡಿರುವ ಮೋದಿ, “ಉಡುಪಿಯ ಶ್ರೀ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಗಳು ಲಕ್ಷಾಂತರ ಜನರ ಹೃದಯದಲ್ಲಿ ಮತ್ತು ಮನಸ್ಸಿನಲ್ಲಿ ಸದಾ ನೆಲೆಸಲಿದ್ದಾರೆ. ಅವರು ಸದಾ ಮಾರ್ಗದರ್ಶಿ ಬೆಳಕಾಗಿದ್ದರು. ಆಧ್ಯಾತ್ಮಿಕತೆ ಮತ್ತು ಸೇವೆಯ ಶಕ್ತಿಕೇಂದ್ರವಾಗಿದ್ದರು. ನಿರಂತರವಾಗಿ ಶ್ರಮಿಸಿದವರು. ಓಂ ಶಾಂತಿ” ಎಂದಿದ್ದಾರೆ.
I consider myself blessed to have got many opportunities to learn from Sri Vishvesha Teertha Swamiji. Our recent meeting, on the pious day of Guru Purnima was also a memorable one. His impeccable knowledge always stood out. My thoughts are with his countless followers. pic.twitter.com/sJMxIfIUSS
— Narendra Modi (@narendramodi) December 29, 2019
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವು ಗಣ್ಯರು ಯತಿಗಳ ನಿಧನಕ್ಕೆ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.
ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದಂಗಳವರ ಅಗಲಿಕೆ ಇಡೀ ಭಾರತೀಯ ಸನಾತನ ಸಂಸ್ಕೃತಿಗೆ ತುಂಬಲಾರದ ನಷ್ಟ. ಪೂಜ್ಯರ ಬದುಕು, ಅವರು ನಮ್ಮ ಸಮಾಜಕ್ಕೆ ನೀಡಿದ ಕೊಡುಗೆಗಳು ಎಂದಿಗೂ ಚಿರಸ್ಮರಣೀಯ.
ಅವರ ಸಾವಿನ ದುಃಖದಲ್ಲಿರುವ ಲಕ್ಷಾಂತರ ಭಕ್ತರಿಗೆ ಶ್ರೀ ಕೃಷ್ಣ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ.
#pejavarashree pic.twitter.com/HcnWvO7Evx— CM of Karnataka (@CMofKarnataka) December 29, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.