ಬೆಂಗಳೂರು: ಹೊಸ ವರ್ಷಾಚರಣೆಗೆ ಇನ್ನು ಕೇವಲ ಒಂದು ದಿನವಷ್ಟೇ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಸುರಕ್ಷತೆಗಾಗಿ ಸುಮಾರು 7 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೇಳಿದ್ದಾರೆ.
ಪೊಲೀಸರ ನಿಯೋಜನೆ ಮಾತ್ರವಲ್ಲದೆ ಸಿಸಿಟಿವಿ ಮತ್ತು ಡ್ರೋನ್ಗಳನ್ನು ಕೂಡ ಹಲವಾರು ಕಡೆ ಕಣ್ಗಾವಲಿಗೆ ಇರಿಸಲಾಗಿದೆ. ಎಂಜಿ ರೋಡ್ ಮತ್ತು ಬ್ರಿಗೇಡ್ ರೋಡ್ಗಳಲ್ಲಿ ಸಾವಿರಕ್ಕೂ ಅಧಿಕ ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ಹೊಸ ವರ್ಷದ ಸಂಭ್ರಮಾಚರಣೆ ಶಾಂತಿಯುತವಾಗಿ ಮತ್ತು ಸಂತೋಷದಾಯಕವಾಗಿದೆ ಇರುವಂತೆ ನೋಡಿಕೊಳ್ಳುವ ಸಲುವಾಗಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
“ಟ್ರಾಫಿಕ್ ಅನ್ನು ನಿಯಂತ್ರಿಸಲಾಗುತ್ತದೆ ಮತ್ತು ಡಿಸೆಂಬರ್ 31 ರಂದು ರಾತ್ರಿ 8 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ದ್ವಿಚಕ್ರ ವಾಹನಗಳನ್ನು ಪ್ರಮುಖ ರಸ್ತೆಗಳಲ್ಲಿ ನಿಲ್ಲಿಸುವುದನ್ನು ಸಂಪೂರ್ಣ ನಿಷೇಧಿಸಲಾಗುತ್ತದೆ. ಸಾರಿಗೆ ವ್ಯವಸ್ಥೆಯನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ” ಎಂದಿದ್ದಾರೆ.
“ಸುಮಾರು 270 ಹೊಯ್ಸಳ ಪ್ಯಾಟ್ರೋಲಿಂಗ್ ವೆಹಿಕಲ್ಸ್ಗಳನ್ನು ಕರ್ತವ್ಯಕ್ಕಾಗಿ ನಿಯೋಜನೆಗೊಳಿಸಲಾಗಿದೆ. ಕುಡಿದು ವಾಹನ ಚಲಾಯಿಸುವವರ ಮೇಲೆ ನಿಗಾ ವಹಿಸುವುದಕ್ಕೆ ಈ ವ್ಯವಸ್ಥೆಯನ್ನು ಮಾಡಲಾಗಿದೆ” ಎಂದಿದ್ದಾರೆ.
ಕುಡಿದು ವಾಹನ ಚಲಾಯಿಸುವ ಬಗ್ಗೆ ಎಚ್ಚರಿಕೆಯನ್ನು ನೀಡಿದ ಭಾಸ್ಕರ್ ರಾವ್ ಅವರು, ಈ ತಪ್ಪುಗಳನ್ನು ಮಾಡಿದವರ ಅವರ ವಿರುದ್ಧ ಪ್ರಕರಣಗಳನ್ನು ದಾಖಲು ಮಾಡಲಾಗುತ್ತದೆ ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ.
ಅಲ್ಲದೆ ಸಂಭ್ರಮಾಚರಣೆಯ ವೇಳೆ ಮಹಿಳೆಯರು ಮತ್ತು ಯುವತಿಯರು ಹೆಚ್ಚು ಜಾಗೃತರಾಗಿರಬೇಕೆಂದು ಅವರು ಸಲಹೆ ನೀಡಿದ್ದಾರೆ.
“ಭಾರಿ ಜನಸಮೂಹ ಸೇರುವುದರ ದುರ್ಬಳಕೆಯನ್ನು ಸಮಾಜಘಾತುಕ ಶಕ್ತಿಗಳು ಮಾಡಿಕೊಳ್ಳುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮಹಿಳೆಯರು ಮತ್ತು ಯುವತಿಯರು ತಮ್ಮ ಭದ್ರತೆಯ ಬಗ್ಗೆ ಹೆಚ್ಚು ಜಾಗೃತರಾಗಿರಬೇಕು. ಅಪರಿಚಿತರೊಂದಿಗೆ ಮಾತನಾಡುವುದು ಅಪಾಯವನ್ನು ತಂದೊಡ್ಡಬಲ್ಲದು” ಎಂದಿದ್ದಾರೆ.
ರೆಸ್ಟೋರೆಂಟ್, ಪಬ್ ಮತ್ತು ಬಾರ್ಗಳನ್ನು 2 ಗಂಟೆಯವರೆಗೆ ತೆರೆದಿರುವುದಕ್ಕೆ ಅವಕಾಶವನ್ನು ನೀಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.