ನವದೆಹಲಿ: ಸಿಖ್ ಪಂಥದ ಧರ್ಮಗುರು ಗುರು ಗೋವಿಂದ್ ಸಿಂಗ್ ಅವರ ಜನ್ಮ ದಿನಾಚರಣೆಯನ್ನು ಇಂದು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಗುರುವಿನ ಕೊಡುಗೆಗಳನ್ನು ಸ್ಮರಿಸಿದ್ದಾರೆ.
“ಜನ್ಮದಿನಾಚರಣೆಯಂದು ಗುರು ಗೋಬಿಂದ್ ಸಿಂಗ್ ಜಿ ಅವರಿಗೆ ಗೌರವ ನಮನ. ಅವರು ತಮ್ಮ ಜೀವನವನ್ನು ಜನರ ಸೇವೆಗಾಗಿ ಮತ್ತು ಸತ್ಯ, ನ್ಯಾಯ ಮತ್ತು ಸಹಾನುಭೂತಿಯ ಮೌಲ್ಯಗಳನ್ನು ಎತ್ತಿಹಿಡಿಯಲು ಮೀಸಲಿಟ್ಟರು. ಗುರು ಗೋಬಿಂದ್ ಸಿಂಗ್ ಅವರ ಜೀವನ ಮತ್ತು ಬೋಧನೆಗಳು ನಮಗೆ ಸ್ಫೂರ್ತಿ ನೀಡುತ್ತವೆ” ಎಂದು ಕೋವಿಂದ್ ಟ್ವೀಟ್ ಮಾಡಿದ್ದಾರೆ.
Homage to Guru Gobind Singh Ji on his birth anniversary. He devoted his life to serving the people and upholding the values of truth, justice and compassion. The life and teachings of Guru Gobind Singh Ji continue to inspire us.
— President of India (@rashtrapatibhvn) January 2, 2020
ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ಕೂಡ ಈ ಸಂದರ್ಭದಲ್ಲಿ ಭಾರತದ ಜನರಿಗೆ ಶುಭಾಶಯಗಳನ್ನು ತಿಳಿಸಿದರು.
“ಗುರು ಗೋಬಿಂದ್ ಸಿಂಗ್ ಜಯಂತಿಯ ಶುಭ ಸಂದರ್ಭದಲ್ಲಿ ದೇಶವಾಸಿಗಳಿಗೆ ಶುಭಾಶಯಗಳು. ಜೀವನದುದ್ದಕ್ಕೂ ಶ್ರೀ ಗುರು ಗೋಬಿಂದ್ ಸಿಂಗ್ ಅನ್ಯಾಯದ ವಿರುದ್ಧ ಎದ್ದುನಿಂತರು. ಅವರ ಬೋಧನೆಗಳು ಸಾರ್ವಕಾಲಿಕವಾಗಿವೆ ಮತ್ತು ಎಲ್ಲ ಸಮಯದಲ್ಲೂ ಪ್ರಸ್ತುತವಾಗುತ್ತವೆ” ಎಂದು ನಾಯ್ಡು ಟ್ವೀಟ್ ಮಾಡಿದ್ದಾರೆ.
“ಅವರ ಬೋಧನೆಗಳು ಉತ್ತಮ ಮಾನವರಾಗಲು ನಮಗೆ ಪ್ರೇರಣೆ ನೀಡಲಿ ಮತ್ತು ನಿರ್ಗತಿಕ, ಬಡ ಮತ್ತು ದೀನ ದಲಿತರಿಗೆ ಸೇವೆ ಸಲ್ಲಿಸಲು ಮಾನವೀಯತೆಗೆ ಮಾರ್ಗದರ್ಶನ ನೀಡಲಿ” ಎಂದು ಅವರು ಹೇಳಿದ್ದಾರೆ.
आज गुरु गोबिंद सिंह जी की जन्म जयंती के पावन अवसर पर पूज्य गुरु की स्मृति को सादर नमन करता हूं तथा देशवासियों को हार्दिक शुभकामनाएं देता हूं।
गुरु गोबिंद सिंह जी का जीवन संदेश तथा उनके कृतित्व हमारे राष्ट्रीय, सामाजिक और निजी जीवन में आज भी अनुकरणीय हैं।#GuruGobindSingh pic.twitter.com/KCVtGeYCRU
— Vice President of India (@VPSecretariat) January 2, 2020
ಪ್ರಧಾನಿ ನರೇಂದ್ರ ಮೋದಿಯವರು ಟ್ವಿಟ್ ಮಾಡಿ, “ಗುರು ಗೋವಿಂದ್ ಸಿಂಗ್ ಅವರ ಪ್ರಕಾಶ ಪರ್ವದ ಅಂಗವಾಗಿ ಅವರಿಗೆ ತಲೆ ಬಾಗುತ್ತೇನೆ” ಎಂದಿದ್ದಾರೆ. ಅಲ್ಲದೇ, ವೀಡಿಯೋವನ್ನೂ ಹಂಚಿಕೊಂಡಿದ್ದಾರೆ.
We bow to the venerable Shri Guru Gobind Singh Ji on his Prakash Parv.
ਦਸਮ ਪਿਤਾ ਸਾਹਿਬ ਸ੍ਰੀ ਗੁਰੂ ਗੋਬਿੰਦ ਸਿੰਘ ਜੀ ਦੇ ਪ੍ਰਕਾਸ਼ ਪੁਰਬ ਮੌਕੇ ਅਸੀਂ ਉਨ੍ਹਾਂ ਅੱਗੇ ਸੀਸ ਝੁਕਾਉਂਦੇ ਹਾਂ। pic.twitter.com/VfPmN9G7po
— Narendra Modi (@narendramodi) January 2, 2020
ಗುರು ಗೋವಿಂದ್ ಸಿಂಗ್ ಅವರು ಪಾಟ್ನಾದಲ್ಲಿ ಜನಿಸಿದ ಸಿಖ್ ಧರ್ಮದ 10 ನೇ ಗುರು. ಅವರ ಜನ್ಮ ದಿನಾಚರಣೆಯನ್ನು ವಿಶ್ವದಾದ್ಯಂತ ಬಹಳ ಸಂತೋಷದಿಂದ ಮತ್ತು ಉತ್ಸಾಹದಿಂದ ಆಚರಿಸಲಾಗುತ್ತದೆ, ಅವರ ಭಕ್ತರು ಗುರುದ್ವಾರಗಳಿಗೆ ಭೇಟಿ ನೀಡುತ್ತಾರೆ ಮತ್ತು ಧಾರ್ಮಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಾರೆ. ಗುರುವಿನ ಬೋಧನೆಗಳಂತೆ ಅವರ ಭಕ್ತರು ಬಡವರಿಗೆ ಮತ್ತು ದೀನದಲಿತರಿಗೆ ಸೇವೆ ಸಲ್ಲಿಸಲು ಈ ದಿನವನ್ನು ಮೀಸಲಿಡುತ್ತಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.