ನವದೆಹಲಿ: 2019ರ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಪಕ್ಷಗಳ ಅಭಿಯಾನವನ್ನು ಎದುರಿಸುವ ನಿಟ್ಟಿನಲ್ಲಿ ಬಿಜೆಪಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳನ್ನು ಮುನ್ನಡೆಸಲು ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಮುಖ್ಯಸ್ಥ ಅಮಿತ್ ಶಾ, ಪಕ್ಷದ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ರಾಜ್ಯ ಉಸ್ತುವಾರಿಗಳನ್ನು ನೇಮಿಸಿದ್ದಾರೆ.
ವರದಿಗಳ ಪ್ರಕಾರ, ಪಕ್ಷದ ಮುಖಂಡ ಹೇಮಂತ್ ಬಿಸ್ವಾ ಶರ್ಮಾ ಮತ್ತು ರಾಹುಲ್ ಸಿನ್ಹಾ ಅವರು ಪಶ್ಚಿಮ ಬಂಗಾಳ, ಜಾರ್ಖಂಡ್, ಒರಿಸ್ಸಾ ಮತ್ತು ಈಶಾನ್ಯದಲ್ಲಿ ಪಕ್ಷದ ಸಿಎಎ ಅಭಿಯಾನವನ್ನು ಮುನ್ನಡೆಸಲಿದ್ದಾರೆ. ಉತ್ತರಪ್ರದೇಶ ಮತ್ತು ಬಿಹಾರದಲ್ಲೂ ಈ ಕಾರ್ಯವನ್ನು ನಿರ್ವಹಿಸಲಿದ್ದಾರೆ.
ಮಧ್ಯಪ್ರದೇಶ, ಉತ್ತರಾಖಂಡ, ದೆಹಲಿ ಮತ್ತು ಛತ್ತೀಸ್ಗಢದಲ್ಲಿ ಪೌರತ್ವ ಕಾನೂನಿನ ಬಗ್ಗೆ ಪಕ್ಷದ ದೃಷ್ಟಿಕೋನವನ್ನು ಪ್ರಸ್ತುತಪಡಿಸುವ ಮತ್ತು ಉತ್ತೇಜಿಸುವ ಕಾರ್ಯವನ್ನು ಅವಿನಾಶ್ ರೈ ಅವರಿಗೆ ವಹಿಸಲಾಗಿದೆ. ಮಹಾರಾಷ್ಟ್ರ, ರಾಜಸ್ಥಾನ, ಗುಜರಾತ್, ಗೋವಾ ಮತ್ತು ದಮನ್ ಮತ್ತು ಡಿಯುಗಳಲ್ಲಿ ಸಿಎಎ ಅಭಿಯಾನವನ್ನು ಮುನ್ನಡೆಸುವ ಕಾರ್ಯವನ್ನು ಸರೋಜ್ ಪಾಂಡೆಗೆ ವಹಿಸಲಾಗಿದೆ. ಹರಿಯಾಣ, ಪಂಜಾಬ್, ಹಿಮಾಚಲ ಪ್ರದೇಶ, ಚಂಡೀಗಢ ಮತ್ತು ಜಮ್ಮು ಮತ್ತು ಕಾಶ್ಮೀರಗಳಲ್ಲಿ ಕಾರ್ಯಕ್ರಮವನ್ನು ಮುನ್ನಡೆಸಲು ಸುರೇಶ್ ಭಟ್ ಅವರಿಗೆ ಜವಾಬ್ದಾರಿ ವಹಿಸಲಾಗಿದೆ.
ಪಕ್ಷದ ಮುಖಂಡ ರವೀಂದ್ರ ರಾಜು ದಕ್ಷಿಣ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಕರ್ನಾಟಕ ಮತ್ತು ಪುದುಚೇರಿಗಳಲ್ಲಿ ಈ ಕಾರ್ಯಕ್ರಮವನ್ನು ಮುನ್ನಡೆಸಲಿದ್ದಾರೆ.
ಪ್ರತಿಪಕ್ಷಗಳು ಸಿಎಎ ವಿರುದ್ಧ ತಪ್ಪು ಮಾಹಿತಿಯನ್ನು ರವಾನಿಸಿ ಜನರನ್ನು ಸರ್ಕಾರದ ವಿರುದ್ಧ ಎತ್ತಿ ಕಟ್ಟುವ ಪ್ರಯತ್ನವನ್ನು ಮಾಡುತ್ತಿದೆ. ಈ ಹಿನ್ನಲೆಯಲ್ಲಿ ಬಿಜೆಪಿ ಸಿಎಎ ಪರವಾಗಿ ಅಭಿಯಾನವನ್ನು ನಡೆಸಿ ಜನರಿಗೆ ಅರಿವು ಮೂಡಿಸುವ ಪ್ರಯತ್ನ ಮಾಡುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.