ನವದೆಹಲಿ: ರಾಜಸ್ಥಾನದ ಕೋಟಾದ ಜೆಕೆ ಲೋನ್ ಆಸ್ಪತ್ರೆಯಲ್ಲಿ ಹೆಚ್ಚುತ್ತಿರುವ ಶಿಶುಗಳ ಸಾವಿನ ಬಗ್ಗೆ ಕೇಂದ್ರ ಸಚಿವ ಸ್ಮೃತಿ ಇರಾನಿ ಕಳವಳ ವ್ಯಕ್ತಪಡಿಸಿದ್ದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ವಿರುದ್ಧ ವಾಗ್ದಾಳಿಯನ್ನು ನಡೆಸಿದ್ದಾರೆ. ರಾಜ್ಯ ಸರ್ಕಾರವು ಈ ವಿಷಯದ ಬಗ್ಗೆ ಸಮಯಕ್ಕೆ ಸರಿಯಾಗಿ ಗಮನ ಹರಿಸದಿರಲು ಕಾರಣವೇನು ಎಂದು ಅವರು ಪ್ರಶ್ನಿಸಿದ್ದಾರೆ.
“ಮಕ್ಕಳ ನಿರಂತರ ಸಾವಿನ ನಂತರವೂ ರಾಜಸ್ಥಾನ ಸರ್ಕಾರವು ಅದರತ್ತ ಗಮನ ಹರಿಸಿಲ್ಲ. ಈ ಘಟನೆಗೆ ರಾಜಸ್ಥಾನ ಸರ್ಕಾರ ಯಾರ ಮೇಲೆ ಬೊಟ್ಟು ಮಾಡುತ್ತದೆ” ಎಂದು ಸ್ಮೃತಿ ಹೇಳಿದ್ದಾರೆ.
ಕೋಟಾದ ಸರ್ಕಾರಿ ಜೆಕೆ ಲೋನ್ ಆಸ್ಪತ್ರೆಯಲ್ಲಿ ಒಂದು ತಿಂಗಳಲ್ಲಿ ಕನಿಷ್ಠ 104 ಶಿಶುಗಳು ಸಾವನ್ನಪ್ಪಿದ್ದು, ಆಸ್ಪತ್ರೆಯ ಸಿಬ್ಬಂದಿಯ ನಿರ್ಲಕ್ಷ್ಯದ ಬಗ್ಗೆ ಇದು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಡಿಸೆಂಬರ್ ಕೊನೆಯ ಎರಡು ದಿನಗಳಲ್ಲಿ ಈ ಆಸ್ಪತ್ರೆಯಲ್ಲಿ ಒಂಬತ್ತು ಶಿಶುಗಳು ಸಾವನ್ನಪ್ಪಿವೆ.
ಆಸ್ಪತ್ರೆಯಲ್ಲಿ ಶಿಶುಗಳ ಸಾವಿನ ಹಿನ್ನಲೆಯಲ್ಲಿ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಬಿಜೆಪಿ ಮತ್ತು ರಾಜ್ಯದ ಇತರ ವಿರೋಧ ಪಕ್ಷಗಳು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿವೆ.
ಇಲ್ಲಿ ನಡೆಯುತ್ತಿರುವ ಶಿಶುಗಳ ಮರಣಮೃದಂಗ ಇಡೀ ದೇಶವನ್ನೇ ಆಘಾತಕ್ಕೊಳಪಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.