ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕುಲ್ಲನ್ ಗಂಡರ್ಬಲ್ನಲ್ಲಿ ಲಷ್ಕರ್-ಎ-ತೋಯ್ಬಾ (ಎಲ್ಇಟಿ)ದ ಮೋಸ್ಟ್ ವಾಂಟೆಂಡ್ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಶುಕ್ರವಾರ ರಾತ್ರಿ ಬಂಧಿಸಿವೆ. ಲಷ್ಕರ್ನ ಉನ್ನತ ಭಯೋತ್ಪಾದಕ ನಿಸ್ಸಾರ್ ಅಹ್ಮದ್ ದಾರ್ ಬಂಧಿತ ಎಂದು ಗುರುತಿಸಲಾಗಿದೆ. ಈತನಿಗಾಗಿ ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದರು. ಈ ಉಗ್ರ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಲು ಯೋಜಿಸುತ್ತಿದ್ದ ಎಂದು ಮೂಲಗಳು ತಿಳಿಸಿವೆ.
ಈತ ಕುಲ್ಲನ್ ಗಂಡರ್ಬಲ್ ಪ್ರದೇಶದ ಆಸ್ಪತ್ರೆಯಲ್ಲಿ ಇರುವ ಬಗ್ಗೆ ಮಾಹಿತಿಯನ್ನು ಪಡೆದ ಶ್ರೀನಗರ ಪೊಲೀಸರು ಮತ್ತು ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆಯನ್ನು ನಡೆಸಿ ಶುಕ್ರವಾರ ರಾತ್ರಿ ಈತನನ್ನು ಬಂಧಿಸಿದ್ದಾರೆ. ಈತನ ಬಳಿಯಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಶ್ರೀನಗರದಲ್ಲಿ ಮತ್ತು ದೇಶದಲ್ಲಿ ಪಾಕಿಸ್ಥಾನ ಬೆಂಬಲಿತ ಭಯೋತ್ಪಾದಕ ಸಂಘಟನೆಗಳು ನಡೆಸುತ್ತಿರುವ ಭಯೋತ್ಪಾದಕ ಚಟುವಟಿಕೆಗಳ ಬಗ್ಗೆ ಆತನನ್ನು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
23 ವರ್ಷದ ದಾರ್ ಕಳೆದ ಹಲವಾರು ವರ್ಷಗಳಿಂದ ಉಗ್ರ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದಾನೆ ಮತ್ತು ಈತ ವರ್ಗೀಕೃತ ಭಯೋತ್ಪಾದಕ ಎಂದು ಪರಿಗಣಿಸಲ್ಪಟ್ಟಿದ್ದಾನೆ. ಆತನ ವಿರುದ್ಧ ಕನಿಷ್ಠ ಎಂಟು ಎಫ್ಐಆರ್ ದಾಖಲಾಗಿದ್ದು, ಅದರಲ್ಲಿ 7 ಪ್ರಕರಣಗಳು 2016 ರಲ್ಲಿ ಮತ್ತು 2019 ರಲ್ಲಿ ಒಂದು ದಾಖಲಾಗಿದೆ. ಈತನನ್ನು ಎರಡು ಬಾರಿ, 2016 ರಲ್ಲಿ ಒಂದು ಬಾರಿ ಮತ್ತು 2017 ರಲ್ಲಿ ಮತ್ತೆ ಬಂಧಿಸಲಾಗಿದೆ.
ದಾರ್ ಉತ್ತರ ಕಾಶ್ಮೀರದ ಉನ್ನತ ಲಷ್ಕರ್ ಭಯೋತ್ಪಾದಕ ಸಲೀಂ ಪರೆಯ ಸಹಚರ ಎಂದು ನಂಬಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.