ನವದೆಹಲಿ: ಪಾಕಿಸ್ಥಾನದ ನಂಕಾನಾ ಸಾಹಿಬ್ ಗುರುದ್ವಾರದ ಮೇಲೆ ನಡೆದ ಕಲ್ಲು ತೂರಾಟ ಮತ್ತು ಪೇಶಾವರದಲ್ಲಿ ಸಿಖ್ ಯುವಕನ ಹತ್ಯೆಗೆ ಭಾರತ ತೀವ್ರವಾಗಿ ಪ್ರತಿಕ್ರಿಯೆ ನೀಡಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದೆ.
ಪೇಶಾವರದಲ್ಲಿ ಖ್ಯಾತ ಪತ್ರಕರ್ತ ಹರ್ಮೀತ್ ಸಿಂಗ್ ಅವರ ಸಹೋದರ ರವೀಂದರ್ ಸಿಂಗ್ ಅವರ ಹತ್ಯೆಯ ಬಗ್ಗೆ ಕೇಂದ್ರ ವಿದೇಶಾಂಗ ಸಚಿವಾಲಯ ಭಾನುವಾರ ಖಂಡನೆಯನ್ನು ವ್ಯಕ್ತಪಡಿಸಿದ್ದು, ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ನಿಲ್ಲಿಸಿ ಮತ್ತು ಕಠಿಣ ಶಿಕ್ಷೆಯನ್ನು ವಿಧಿಸಲು ತಕ್ಷಣ ಕ್ರಮ ಕೈಗೊಳ್ಳಿ ಎಂದು ಪಾಕಿಸ್ಥಾನಕ್ಕೆ ಆಗ್ರಹಿಸಿದೆ.
25 ವರ್ಷದ ರವೀಂದರ್ ಅವರು ಕೆಲ ದಿನಗಳ ಹಿಂದೆಯಷ್ಟೇ ವಿವಾಹವಾಗಿದ್ದರು ಮತ್ತು ಶಾಂಗ್ಲಾದಿಂದ ಪೇಶಾವರಕ್ಕೆ ಆಗಮಿಸುತ್ತಿದ್ದರು. ಈ ವೇಳೆ ಅವರನ್ನು ದುಷ್ಕರ್ಮಿಗಳು ಕೊಂದು ಹಾಕಿದ್ದಾರೆ. ನಂಕಾನಾ ಸಾಹಿಬ್ ಗುರುದ್ವಾರದ ಮೇಲೆ ಕಲ್ಲು ತೂರಾಟಗಳು ನಡೆದ ನಂತರ ಈ ಘಟನೆ ನಡೆದಿದೆ.
ಭಾರತ ಪಾಕಿಸ್ಥಾನದಲ್ಲಿ ಅಲ್ಪಸಂಖ್ಯಾತರ ವಿರುದ್ಧ ನಡೆಯುತ್ತಿರುವ ದೌರ್ಜನ್ಯಗಳನ್ನು ಭಾರತ ಕಟುವಾಗಿ ಖಂಡಿಸಿದೆ. “ಸಿಖ್ ಸಮುದಾಯದ ಸದಸ್ಯರ ಸುರಕ್ಷತೆ, ಭದ್ರತೆ ಮತ್ತು ಏಳಿಗೆಯನ್ನು ಖಚಿತಪಡಿಸಿಕೊಳ್ಳಲು ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು ಗುರುದ್ವಾರವನ್ನು ಅಪವಿತ್ರಗೊಳಿಸಿದ ದುಷ್ಕರ್ಮಿಗಳ ವಿರುದ್ಧ ಬಲವಾದ ಕ್ರಮ ತೆಗೆದುಕೊಳ್ಳಬೇಕೆಂದು” ಭಾರತಕ್ಕೆ ಆ ದೇಶಕ್ಕೆ ಆಗ್ರಹಿಸಿದೆ.
ಈ ನಡುವೆ ದೆಹಲಿಯ ಸಿಖ್ ಸಮುದಾಯವು ನಂಕನಾ ಸಾಹಿಬ್ ಮೇಲೆ ನಡೆದ ಕಲ್ಲು ತೂರಾಟದ ವಿರುದ್ಧ ತೀವ್ರವಾಗಿ ಪ್ರತಿಭಟನೆ ನಡೆಸಿದೆ. ದೆಹಲಿಯ ಪಾಕಿಸ್ಥಾನ ಹೈಕಮಿಷನ್ ಬಳಿ ಸಿಖ್ ಗುರುದ್ವಾರ ನಿರ್ವಹಣಾ ಸಮಿತಿ ಮತ್ತು ಅಕಾಲಿ ದಳ ಶನಿವಾರ ದೊಡ್ಡ ಪ್ರತಿಭಟನೆ ನಡೆಸಿದೆ.
ಪಾಕಿಸ್ಥಾನದಲ್ಲಿ ಸಿಖ್ಖರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ಖಂಡಿಸಿ ವಿಶ್ವದಾದ್ಯಂತದಿಂದ ಪ್ರತಿಕ್ರಿಯೆಗಳು ಬರುತ್ತಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.