ಬೆಂಗಳೂರು: ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಇಂದು ಕೃಷ್ಣೈಕ್ಯರಾದ ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರಿಗೆ ಬೆಂಗಳೂರಿನ ಪೂರ್ಣ ಪ್ರಜ್ಞಾ ಮಠದಲ್ಲಿ ಸಂತಾಪವನ್ನು ಸೂಚಿಸಿದರು ಮತ್ತು ಅವರು ತೋರಿಸಿದ ಮಾರ್ಗವನ್ನು ಅನುಸರಿಸಿ ಭಾರತದಲ್ಲಿ ಜಾತಿರಹಿತ ಸಮಾಜವನ್ನು ನಿರ್ಮಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕೆಂದು ಮನವಿ ಮಾಡಿದರು.
ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರು ಸದಾ ಪೀಡಿತ ಜನರಿಗೆ ಸಹಾಯ ಮತ್ತು ಸಾಂತ್ವನವನ್ನು ನೀಡುತ್ತಿದ್ದರು ಮತ್ತು ಅವರು ನಿರಂತರವಾಗಿ ನಿರ್ಗತಿಕ ಮತ್ತು ಬಡವರ ಸಹಾಯಕ್ಕೆ ಧಾವಿಸುತ್ತಿದ್ದರು ಎಂದು ಅವರು ಹೇಳಿದರು.
“ಪೇಜಾವರ ಶ್ರೀಗಳು ಸಮಾಜದ ಮಾರ್ಗದರ್ಶಕ ಬೆಳಕಾಗಿ ಕಾರ್ಯನಿರ್ವಹಿಸಿದ ಸಂತರು, ಋಷಿಗಳು ಮತ್ತು ಮುನಿಗಳು. ಅವರು ಭಾರತದ ದೀರ್ಘ ಸಂಪ್ರದಾಯವನ್ನು ಪ್ರತಿನಿಧಿಸಿದರು ಮತ್ತು ಪೋಷಿಸಿದರು. ನಮ್ಮ ಪ್ರಾಚೀನ ಋಷಿಮುನಿಗಳು ಯಾವಾಗಲೂ ಎಲ್ಲಕ್ಕಿಂತ ಹೆಚ್ಚಾಗಿ ಸಮಾಜದ ಕಲ್ಯಾಣವನ್ನು ಬಯಸುತ್ತಿದ್ದರು. ಸಮಾಜದ ಸದಾಚಾರದ ಹಾದಿಯಲ್ಲಿ ಉಳಿಯುವುದನ್ನು ಖಚಿತಪಡಿಸಿಕೊಳ್ಳಲು ಮಹಾನ್ ಋಷಿ ದಧೀಚಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದರು” ಎಂದು ಅವರು ಹೇಳಿದರು.
ನಮ್ಮ ಅದ್ಭುತ ಸಂಪ್ರದಾಯದಲ್ಲಿ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರ ಜೀವನ ಮತ್ತು ಪ್ರಯಾಣವು ಒಂದು ಉದಾತ್ತ ಅಧ್ಯಾಯವಾಗಿದೆ ಎಂದು ಹೇಳಿದ ನಾಯ್ಡು, ಅವರನ್ನು ಶ್ರದ್ಧಾಭರಿತ ಸಾಮಾಜಿಕ ಸೇವೆಗೆ ಆದರ್ಶಪ್ರಾಯರು ಎಂದು ಬಣ್ಣಿಸಿದರು. ನಮ್ಮ ಇಂದಿನ ಸಮಾಜದ ಸಾಂಸ್ಕೃತಿಕ, ಧಾರ್ಮಿಕ ಮತ್ತು ಸಾಮಾಜಿಕ ಮೌಲ್ಯಗಳನ್ನು ಶುದ್ಧೀಕರಿಸಲು ಸ್ವಾಮೀಜಿ ತಮ್ಮ ಜೀವನವನ್ನು ಅರ್ಪಿಸಿದ್ದರು ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.