ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ನಿರ್ಭಯಾ ಅತ್ಯಾಚಾರಿಗಳಿಗೆ ಡೆತ್ ವಾರೆಂಟ್ ನೀಡಿದೆ. ನಾಲ್ವರು ಅತ್ಯಾಚಾರಿಗಳನ್ನು ಜನವರಿ 22 ರಂದು ಬೆಳಿಗ್ಗೆ 7 ಗಂಟೆಗೆ ಗಲ್ಲಿಗೇರಿಸಲಾಗುತ್ತಿದೆ.
ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸತೀಶ್ ಕುಮಾರ್ ಅರೋರ ಅವರು ಡೆತ್ ವಾರೆಂಟ್ ರವಾನಿಸಿದ್ದಾರೆ. 14 ದಿನಗಳೊಳಗೆ ಅಪರಾಧಿಗಳು ತಮ್ಮ ಕಾನೂನು ಪರಿಹಾರವನ್ನು ಬಳಕೆ ಮಾಡಿಕೊಳ್ಳಬಹುದೆಂದು ಕೋರ್ಟ್ ಹೇಳಿದೆ. ತೀರ್ಪು ನೀಡುವುದಕ್ಕೂ ಮುನ್ನ ನ್ಯಾಯಾಧೀಶರು ತಿಲಕ್ ಮಾರ್ಗ್ ಪೊಲೀಸ್ ಠಾಣೆಯ ಎಸ್ ಎಚ್ ಓ ಅವರನ್ನು ಕರೆಸಿದ್ದರು. ಎಲ್ಲಾ ಅಪರಾಧಿಗಳೊಂದಿಗೆ ಮಾತನಾಡಿದರು ಮತ್ತು ತಮ್ಮ ಹೇಳಿಕೆ ದಾಖಲಿಸುವಂತೆ ಅವರಿಗೆ ಕೇಳಿಕೊಂಡರು.
ಅಪರಾಧಿಗಳ ಪರ ವಕೀಲ ಎಪಿ ಸಿಂಗ್ ಅವರು, ಸುಪ್ರೀಂಕೋರ್ಟ್ ಮುಂದೆ ಕ್ಯುರೇಟಿವ್ ಪಿಟಿಷನ್ ದಾಖಲಿಸುವುದಾಗಿ ಹೇಳಿದ್ದಾರೆ. ಅಪರಾಧಿಗಳನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.
ನಿರ್ಭಯಾ ಅವರ ತಾಯಿ ಆಶಾ ದೇವಿ ತೀರ್ಪುನ್ನು ಸ್ವಾಗತಿಸಿದ್ದು, ಅಂತಿಮವಾಗಿ ಮಗಳಿಗೆ ನ್ಯಾಯ ದೊರೆತಿದೆ ಎಂದು ಹೇಳಿದ್ದಾರೆ. “ನನ್ನ ಮಗಳಿಗೆ ನ್ಯಾಯ ದೊರೆತಿದೆ. 4 ಅಪರಾಧಿಗಳ ಮರಣದಂಡನೆಯು ದೇಶದ ಮಹಿಳೆಯರಿಗೆ ಅಧಿಕಾರ ನೀಡುತ್ತದೆ. ಈ ನಿರ್ಧಾರವು ನ್ಯಾಯಾಂಗ ವ್ಯವಸ್ಥೆಯಲ್ಲಿ ಜನರ ನಂಬಿಕೆಯನ್ನು ಬಲಪಡಿಸುತ್ತದೆ” ಎಂದು ಅವರು ಹೇಳಿದರು.
ಕಳೆದ ಏಳು ವರ್ಷಗಳಿಂದ ನನ್ನ ಮಗಳ ಭಾವಚಿತ್ರಕ್ಕೆ ನಾವು ಮಾಲಾರ್ಪಣೆ ಮಾಡಿಲ್ಲ, ಅತ್ಯಾಚಾರಿಗಳು ನೇಣಿಗೇರಿದ ದಿನ ನಾವು ಮಗಳ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುತ್ತೇವೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.