ನವದೆಹಲಿ: ವೈಯಕ್ತಿಕ ಹಿತಾಸಕ್ತಿಗಳನ್ನು ಜಮ್ಮು ಮತ್ತು ಕಾಶ್ಮೀರದ ಹಿತಾಸಕ್ತಿಗಿಂತ ಮಿಗಿಲಾಗಿ ಇಟ್ಟುಕೊಂಡಿರುವ ರಾಜಕಾರಣಿಗಳ ವಿರುದ್ಧ ಕಿಡಿಕಾರಿರುವ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರು, ಜಮ್ಮು ಕಾಶ್ಮೀರದಲ್ಲಿ ಈಗ ಭ್ರಷ್ಟಾಚಾರ ಮುಕ್ತ ವಾತಾವರಣವಿದೆ ಎಂದು ಹೇಳಿದರು.
“ಜಮ್ಮು ಮತ್ತು ಕಾಶ್ಮೀರ ಅಭಿವೃದ್ಧಿಯತ್ತ ಸಾಗುತ್ತಿರುವುದು ಒಳ್ಳೆಯ ಬೆಳವಣಿಗೆ. ಈ ಹಿಂದೆ ಕಾಶ್ಮೀರದಲ್ಲಿ ಭ್ರಷ್ಟಾಚಾರವು ಅಭಿವೃದ್ಧಿಗೆ ಅಡ್ಡಿಯುಂಟುಮಾಡಿತ್ತು. ಜಮ್ಮು ಮತ್ತು ಕಾಶ್ಮೀರದಲ್ಲಿ ಈಗ ಭ್ರಷ್ಟಾಚಾರ ಮುಕ್ತ ವಾತಾವರಣವಿದೆ. ಕಾಶ್ಮೀರದ ಹಿತಾಸಕ್ತಿಗಿಂತ ವೈಯಕ್ತಿಕ ಹಿತಾಸಕ್ತಿಯನ್ನು ಮಿಗಿಲಾಗಿ ಇಟ್ಟುಕೊಂಡಿದ್ದ ರಾಜಕಾರಣಿಗಳನ್ನು ಈಗ ಬದಿಗೆ ಸರಿಸಲಾಗಿದೆ” ಎಂದು ನಖ್ವಿ ಹೇಳಿದ್ದಾರೆ.
ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ ಸೇರಿದಂತೆ ದೇಶದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಕುರಿತು ಮಾತನಾಡಿದ ನಖ್ವಿ, “ನಾವೆಲ್ಲರೂ ವಿದ್ಯಾರ್ಥಿಗಳಾಗಿದ್ದೆವು, ಅವರಿಗೆ ಪ್ರತಿಭಟಿಸುವ ಹಕ್ಕಿದೆ ಆದರೆ ಅದಕ್ಕಾಗಿ ಅವರು ಬಲಿಷ್ಠ ಕಾರಣವನ್ನು ಹೊಂದಿರಬೇಕೇ ಹೊರತು ಕಟ್ಟುಕಥೆಗಳನ್ನಲ್ಲ. ಅವರು ದಾರಿ ತಪ್ಪಿದ್ದಾರೆಂದು ಅವರಿಗೆ ಹೇಳಲು ನಮಗೆ ಸಾಂವಿಧಾನಿಕ ಮತ್ತು ಸಾಮಾಜಿಕ ಜವಾಬ್ದಾರಿ ಇದೆ . ಸುಳ್ಳುಗಳನ್ನು ಶೀಘ್ರದಲ್ಲೇ ಸತ್ಯದಿಂದ ಸೋಲಿಸುತ್ತೇವೆ” ಎಂದಿದ್ದಾರೆ.
ಜಮ್ಮು ಕಾಶ್ಮೀರ ಸಹಜತೆಯತ್ತ ಮರಳಿದ್ದು, ಯುನೈಟೆಡ್ ಸ್ಟೇಟ್ಸ್, ಮಾಲ್ಡೀವ್ಸ್, ನಾರ್ವೆ, ಅರ್ಜೆಂಟೀನಾ, ನೈಜರ್, ಟೋಗೊ, ವಿಯೆಟ್ನಾಂ, ಬಾಂಗ್ಲಾದೇಶ, ದಕ್ಷಿಣ ಕೊರಿಯಾ, ಪೆರು, ಮೊರಾಕೊ ಮುಂತಾದ ಸುಮಾರು 15 ರಾಯಭಾರಿಗಳ ಗುಂಪು ಅಲ್ಲಿಗೆ ಭೇಟಿಯನ್ನು ನೀಡುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.