ಬೆಂಗಳೂರು: ಬೆಂಗಳೂರಿನ ಪಿಜಿಯೊಂದರಲ್ಲಿ ಅಡಗಿ ಕುಳಿತಿದ್ದ ಮೂರು ಮಂದಿ ಜಿಹಾದಿಗಳನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ತಮಿಳುನಾಡಿನಲ್ಲಿ ಹಿಂದೂ ಸಂಘಟನೆಯ ಮುಖಂಡರೊಬ್ಬರನ್ನು ಹತ್ಯೆಗೈದ ಆರೋಪ ಇವರ ಮೇಲಿದೆ.
ಕಳೆದ ತಿಂಗಳು ಇವರು ಹಿಂದೂ ಮಕ್ಕಳ್ ಕೊಚ್ಚಿ ಸಂಘಟನೆಯ ಮುಖಂಡನನ್ನು ಹತ್ಯೆ ಮಾಡಿದ್ದರು. ಹತ್ಯೆಯ ಬಳಿಕ ಮೂರು ಮಂದಿ ಬೆಂಗಳೂರಿನಲ್ಲಿ ಅಡಗಿ ಕುಳಿತಿದ್ದರು ಮತ್ತು ಉಳಿದ ಮೂವರು ದೆಹಲಿಯಲ್ಲಿ ಅವಿತಿದ್ದರು. ಇದೀಗ ದೆಹಲಿ ಮತ್ತು ಬೆಂಗಳೂರು ಎರಡೂ ಕಡೆಯು ಆರೋಪಿಗಳ ಬಂಧನವಾಗಿದೆ. ಬಂಧಿತರನ್ನು ಹನೀಫ್ ಖಾನ್, ಇಮ್ರಾನ್ ಖಾನ್, ಮೊಹಮ್ಮೆದ್ ಜೈದ್, ಅಬ್ದುಲ್ ಶಾಮಿಮ್, ಸಯ್ಯದ್ ಅಲಿ ನವಾಸ್ ಹಾಗೂ ಸಿ.ಖಾಜಾ ಮೊಯ್ದೀನ್ ಎಂದು ಗುರುತಿಸಲಾಗಿದೆ.
ಶಂಕಿತ ಉಗ್ರರನ್ನು ವಿಚಾರಣೆಗೊಳಪಡಿಸಲಾಗುತ್ತಿದೆ. ಶಂಕಿತರಿಗೆ ಇಸಿಸ್ ನಂಟು ಇರುವ ಸಾಧ್ಯತೆಗಳಿದ್ದು, ಬೆಂಗಳೂರಿನಲ್ಲಿ ಬಂಧನಕ್ಕೊಳಗಾಗಿರುವ ಮೂವರು ಶಂಕಿತರಲ್ಲಿ ಓರ್ವ ದಾಳಿಗೆ ಸಂಚು ರೂಪಿಸಲು ಯುವಕರನ್ನು ನೇಮಕ ಮಾಡಿಕೊಳ್ಳುವ ಕಾರ್ಯದಲ್ಲಿ ತೊಡಗಿದ್ದ ಎನ್ನಲಾಗಿದೆ.
ಬಂಧಿತ ಶಂಕಿತರು ದಾಳಿಗೆ ದೊಡ್ಡ ಸಂಚನ್ನೇ ರೂಪಿಸಿದ್ದರು ಎಂಬ ಆರೋಪಗಳೂ ಕೇಳಿ ಬಂದಿವೆ. ಇದಕ್ಕಾಗಿ ಶಂಕಿತರು 15 ಸಿಮ್ ಕಾರ್ಡ್ ಗಳನ್ನು ಖರೀದಿ ಮಾಡಿದ್ದು, ಅವುಗಳನ್ನು ಪೊಲೀಸರು ಪತ್ತೆ ಮಾಡುತ್ತಿದ್ದಾರೆ.
ವಿಚಾರಣೆ ವೇಳೆ ಮತ್ತೋರ್ವ ಆರೋಪಿ ಏಜಾಜ್ ಬಾಷಾ ಎಂಬ ವ್ಯಕ್ತಿಯ ಹೆಸರು ಕೇಳಿ ಬಂದಿದ್ದು, ಈತನಿಗೆ ಪೊಲೀಸರು ಬಲೆ ಬೀಸಿದ್ದಾರೆ.
ಬಂಧಿತರಿಂದ 89 ಸುತ್ತಿನ ಗುಂಡುಗಳು, 3 ಪಿಸ್ತೂಲ್ಗಳು, ಬಾಂಬ್ ತಯಾರಿಸಲು ಅಗತ್ಯವಿರುವ ವಸ್ತುಗಳು ಹಾಗೂ ಇನ್ನಿತರೆ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆಂದು ಮೂಲಗಳು ಮಾಹಿತಿ ನೀಡಿವೆ.
ಜನವರಿ 26ರಂದು ದೊಡ್ಡ ದಾಳಿಗೆ ರೂಪಿಸಲಾಗಿದ್ದು, ಇದಕ್ಕಾಗಿ ಮಹಾರಾಷ್ಟ್ರ ಹಾಗೂ ಕರ್ನಾಟಕದಲ್ಲಿ ಉಗ್ರ ಶಿಬಿರಗಳಿಗೆ ನೇಮಕಾತಿ ಪ್ರಕ್ರಿಯೆಗಳು ನಡೆಯುತ್ತಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಕಣ್ಗಾವಲಿರಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.