ಬೆಂಗಳೂರು: ಕನ್ನಡ ನಾಡು ಕಂಡ ಧೀಮಂತ ಸಾಹಿತಿ, ಸಂಶೋಧಕ ಮತ್ತು ಇತಿಹಾಸ ತಜ್ಞ ಡಾ. ಎಂ. ಚಿದಾನಂದಮೂರ್ತಿ ಅವರು ಇಹಲೋಕವನ್ನು ತ್ಯಜಿಸಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ದೀರ್ಘಕಾಲದ ಅನಾರೋಗ್ಯದ ಕಾರಣದಿಂದಾಗಿ ಅವರು ಶನಿವಾರ ನಸುಕಿನ ಜಾವ 3.45ಕ್ಕೆ ಕೊನೆಯುಸಿರೆಳೆದರು ಎಂದು ಮೂಲಗಳು ತಿಳಿಸಿವೆ.
ನಲವತ್ತಕ್ಕೂ ಹೆಚ್ಚು ಮೌಲಿಕ ಕೃತಿಗಳನ್ನು ರಚಿಸಿರುವ ಅವರು, ನೂರಾರು ಸಂಶೋಧನಾ ಲೇಖನಗಳನ್ನು, ಇತಿಹಾಸ ಗ್ರಂಥಗಳನ್ನು ಬರೆದಿದ್ದಾರೆ. ಅಪಾರ ಶಿಷ್ಯ ಬಳಗವನ್ನೂ ಅವರು ಹೊಂದಿದ್ದಾರೆ. ಕನ್ನಡ ನಾಡು ನುಡಿಗಾಗಿ ಹೋರಾಟ ಮಾಡುತ್ತಲೇ ಬಂದಿರುವ ಅವರು, ಗೋಕಾಖ್ ಚಳುವಳಿಗೆ ಮಹತ್ತರವಾದ ಕೊಡುಗೆಯನ್ನು ನೀಡಿದ್ದಾರೆ.
ಕನ್ನಡ ಸಾಹಿತ್ಯದ ಬೆಳವಣಿಗೆ ಅವರು ನೀಡಿದ ಕೊಡುಗೆ ಅಪಾರ. ಹಂಪಿ ಸ್ಮಾರಕಗಳ ಸಂರಕ್ಷಣೆಗೆ ಕನ್ನಡ ನೆಲ-ಜಲ ರಕ್ಷಣೆಗೆ ನಿರಂತರವಾಗಿ ಹೋರಾಟ ನ ಡೆಸಿಕೊಂಡು ಬಂದಿದ್ದರು. ಅವರ ಅಗಲಿಕೆಯಿಂದ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ.
ಬೆಂಗಳೂರಿನ ವಿಜಯನಗರ ಸಮೀಪ ಹಂಪಿ ನಗರದ ಆರ್ಪಿಸಿ ಲೇಔಟ್ನಲ್ಲಿರುವ ಅವರ ನಿವಾಸದಲ್ಲಿ ವಾಸವಾಗಿದ್ದ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. ಅವರ ಪಾರ್ಥಿವ ಶರೀರವನ್ನು ಇಂದು ಸಾರ್ವಜನಿಕ ದರ್ಶನಕ್ಕೆ ಇಟ್ಟು ನಾಳೆ ಚಾಮರಾಜಪೇಟೆಯ ವೀರಶೈವ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.