ನವದೆಹಲಿ: ದೆಹಲಿಯ ಜವಾಹರ್ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಇತ್ತೀಚಿಗೆ ನಡೆದ ದಾಂಧಲೆಗೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವು ಒಂಬತ್ತು ಮಂದಿ ವಿದ್ಯಾರ್ಥಿಗಳಿಗೆ ನೋಟಿಸ್ ಅನ್ನು ಜಾರಿಗೊಳಿಸಿದೆ ಹಾಗೂ ಜನವರಿ 13 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಎಸ್ಐಟಿ ಇಂದ ನೋಟೀಸನ್ನು ಪಡೆದಿರುವ ವಿದ್ಯಾರ್ಥಿನಿಗೆ ವಿಚಾರಣೆಯನ್ನು ನಡೆಸಬೇಕಾದ ದಿನಾಂಕ ಮತ್ತು ಸಮಯವನ್ನು ನಿಗದಿ ಪಡಿಸುವಂತೆ ಸೂಚಿಸಲಾಗಿತ್ತು. ಅದರಂತೆ ದಿನಾಂಕವನ್ನು ನಿಗದಿ ಪಡಿಸಲಾಗಿದೆ. ಮಹಿಳಾ ಪೊಲೀಸ್ ಅಧಿಕಾರಿಯೇ ವಿದ್ಯಾರ್ಥಿನಿಯರನ್ನು ವಿಚಾರಣೆಗೆ ಒಳಪಡಿಸಲಿದ್ದಾರೆ. ಉಳಿದವರನ್ನು ವಿಶೇಷ ತನಿಖಾ ದಳದ ಅಧಿಕಾರಿಗಳು ದೆಹಲಿ ಕಮಲಾನಗರದ ಕ್ರೈಂ ಬ್ರಾಂಚ್ ಕಚೇರಿಯಲ್ಲಿ ವಿಚಾರಣೆಗೊಳಪಡಿಸಲಿದ್ದಾರೆ.
ಜೆಎನ್ಯು ದಾಂಧಲೆಯ ಬಗ್ಗೆ ವಿಚಾರಣೆಯನ್ನು ನಡೆಸುತ್ತಿರುವ ದೆಹಲಿ ಪೊಲೀಸರು, ಶುಕ್ರವಾರ ದಾಂಧಲೆ ನಡೆಸಿದ ಶಂಕಿತ ವಿದ್ಯಾರ್ಥಿಗಳ ಫೋಟೋಗಳನ್ನು ರಿಲೀಸ್ ಮಾಡಿದ್ದರು. ಇದರಲ್ಲಿ ಜೆಎನ್ಯು ವಿದ್ಯಾರ್ಥಿ ನಾಯಕಿ ಆಯಿಷ ಘೋಷ್ ಕೂಡ ಸೇರಿದ್ದಾರೆ.
ವಿಶ್ವವಿದ್ಯಾಲಯದ ಉಪಕುಲಪತಿ ಜಗದೀಶ್ ಕುಮಾರ್ ಅವರು ಶನಿವಾರ ವಿದ್ಯಾರ್ಥಿಗಳಿಗೆ ತರಗತಿಗೆ ಹಾಜರಾಗುವಂತೆ ಮತ್ತು ಶೈಕ್ಷಣಿಕ ಸೆಷನ್ ಅನ್ನು ಪ್ರಾರಂಭಿಸುವಂತೆ ಮನವಿ ಮಾಡಿದ್ದಾರೆ. ಜನವರಿ 13 ರಿಂದ ಸೆಷನ್ ಆರಂಭವಾಗಲಿದೆ ಎಂದು ವಿಶ್ವವಿದ್ಯಾಲಯವು ಅಧಿಸೂಚನೆಯನ್ನು ಹೊರಡಿಸಿದೆ.
ಜನವರಿ 5 ರಂದು ಕೆಲವು ಮುಸುಕುಧಾರಿ ವ್ಯಕ್ತಿಗಳು ವಿಶ್ವವಿದ್ಯಾಲಯದ ಆವರಣದೊಳಗೆ ನುಗ್ಗಿ ಸಿಕ್ಕಸಿಕ್ಕ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.