ನವದೆಹಲಿ: ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ನಾಲ್ವರು ಅಪರಾಧಿಗಳನ್ನು ಗಲ್ಲಿಗೇರಿಸಲು ತಿಹಾರ್ ಜೈಲು ಸಿದ್ಧತೆ ನಡೆಸುತ್ತಿದೆ, ಇದಕ್ಕಾಗಿ ಭಾನುವಾರು ಟ್ರಯಲ್ ನಡೆಸಲಾಗಿದ್ದು, ಇಲ್ಲಿ ನಾಲ್ವರು ಅಪರಾಧಿಗಳ ಡಮ್ಮಿಗಳನ್ನು ಗಲ್ಲಿಗೇರಿಸಲಾಯಿತು.
ಡಮ್ಮಿಗಳನ್ನು ಆಯಾ ತೂಕಕ್ಕೆ ಅನುಗುಣವಾಗಿ ಸಿದ್ಧಪಡಿಸಲಾಗಿತ್ತು. ನಾಲ್ವರ ತೂಕದ ಪ್ರಕಾರ, ಗೋಣಿಚೀಲದ ತೂಕದ ಒಂದೂವರೆ ಪಟ್ಟು ಮಣ್ಣಿನಿಂದ ತುಂಬಿಸಲಾಯಿತು. ಅಲ್ಲದೇ, ಹಗ್ಗದ ಬಲವನ್ನು ಪರಿಶೀಲಿಸಲಾಯಿತು.
ಅಪರಾಧಿಗಳನ್ನು ಜನವರಿ 22 ರ ಬುಧವಾರ ಬೆಳಿಗ್ಗೆ 7 ಗಂಟೆಗೆ ಗಲ್ಲಿಗೇರಿಸಲಾಗುತ್ತಿದೆ. ಆದರೆ ಸುಪ್ರೀಂ ಕೋರ್ಟ್ನಲ್ಲಿ ಅಪರಾಧಿಗಳು ಕ್ಯುರೇಟಿವ್ ಅರ್ಜಿಯನ್ನು ಸಲ್ಲಿಸಿದ್ದಾರೆ, ಇದರ ವಿಚಾರಣೆ ಜನವರಿ 22 ರಂದೇ ನಡೆಯಲಿದೆ. ಒಂದು ವೇಳೆ ಮರಣದಂಡನೆಗೆ ಆದೇಶ ಬಂದರೆ, ಆರೋಪಿಗಳನ್ನು ಹಗ್ಗ ಬಳಸಿ ನೇಣಿಗೆ ಹಾಕಲಾಗುತ್ತದೆ.
ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ನಾಲ್ಕು ಆರೋಪಿಗಳನ್ನು ಒಟ್ಟಿಗೆ ಗಲ್ಲಿಗೇರಿಸಲಾಗುತ್ತಿದೆ.
ಜನವರಿ 7 ರಂದು ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯವು ಪವನ್ ಗುಪ್ತಾ, ಮುಖೇಶ್ ಸಿಂಗ್, ವಿನಯ್ ಶರ್ಮಾ ಮತ್ತು ಅಕ್ಷಯ್ ಠಾಕೂರ್ ಎಂಬ ನಾಲ್ವರು ಅಪರಾಧಿಗಳಿಗೆ ಡೆತ್ ವಾರಂಟ್ ಹೊರಡಿಸಿತ್ತು. ಹೆಚ್ಚುವರಿ ಸೆಷನ್ ನ್ಯಾಯಾಧೀಶ ಸತೀಶ್ ಕುಮಾರ್ ಅರೋರಾ ಅವರು ಇವರ ವಿರುದ್ಧ ಡೆತ್ ವಾರಂಟ್ ಹೊರಡಿಸಿದ್ದಾರೆ.
2012ರ ಡಿಸೆಂಬರ್ 16 ರಂದು ಈ ಆರೋಪಿಗಳು ಚಲಿಸುತ್ತಿದ್ದ ಬಸ್ಸಿನಲ್ಲಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿಯನ್ನು ಅತ್ಯಾಚಾರಕ್ಕೊಳಪಡಿಸಿ ಹತ್ಯೆ ಮಾಡಿದ್ದರು. ಈ ಘಟನೆ ಇಡೀ ರಾಷ್ಟ್ರವನ್ನೇ ತಲ್ಲಣಗೊಳಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.