ನವದೆಹಲಿ: 60 ವರ್ಷಗಳಿಂದ ದೇಶದ ಆರ್ಥಿಕತೆಯನ್ನು ಮುನ್ನಡೆಸಲು ಏನೂ ಮಾಡದ ಪಕ್ಷವು ನಿರುದ್ಯೋಗ ಮತ್ತು ಆರ್ಥಿಕ ಕುಸಿತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ಪ್ರಶ್ನಿಸುತ್ತಿದೆ ಮತ್ತು ಸಲಹೆ ನೀಡುತ್ತಿದೆ ಎಂದು ಹೇಳುವ ಮೂಲಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಟಾಂಗ್ ನೀಡಿದರು.
“60 ವರ್ಷಗಳಲ್ಲಿ ದೇಶದ ಆರ್ಥಿಕತೆಯನ್ನು ಮುನ್ನಡೆಸಲು ಏನೂ ಮಾಡದವರು ಈಗ ಮೋದಿ ಸರ್ಕಾರವನ್ನು ಪ್ರಶ್ನಿಸುತ್ತಿದ್ದಾರೆ. ದಶಕಗಳಿಂದ ದೇಶವನ್ನು ಆಳುತ್ತಿದ್ದರೂ, ದೇಶದ ಆರ್ಥಿಕತೆಯನ್ನು ಕೇವಲ 2 ಟ್ರಿಲಿಯನ್ ಡಾಲರ್ಗೆ ಮಾತ್ರ ಕಾಂಗ್ರೆಸ್ಸಿಗೆ ಕೊಂಡೊಯ್ಯಲು ಸಾಧ್ಯವಾಯಿತು. ಆದರೆ, ಎನ್ಡಿಎ ಸರ್ಕಾರ ಕೇವಲ ಐದು ವರ್ಷಗಳ ಅವಧಿಯಲ್ಲಿ ಅದನ್ನು 3 ಟ್ರಿಲಿಯನ್ ಡಾಲರ್ಗೆ ತೆಗೆದುಕೊಂಡು ಹೋಗಿದೆ “ಎಂದು ಶಾ ಹೇಳಿದ್ದಾರೆ.
ಇಂಡಿಯನ್ ಇನ್ಸ್ಟಿಟ್ಯೂಶನ್ ಆಫ್ ಸ್ಕಿಲ್ಸ್ (ಐಐಎಸ್)ಗೆ ಅಡಿಪಾಯ ಹಾಕಿದ ನಂತರ ಗೃಹ ಸಚಿವರು ಸಭೆಯನ್ನುದ್ದೇಶಿಸಿ ಮಾತನಾಡಿದರು.
“ಭಾರತವನ್ನು 5 ಟ್ರಿಲಿಯನ್ ಯುಎಸ್ಡಿ ಆರ್ಥಿಕತೆಯನ್ನಾಗಿ ಮಾಡುವ ಗುರಿಯನ್ನು ಎನ್ಡಿಎ ಸರ್ಕಾರವು ಹೊಂದಿದೆ, ಅದನ್ನು ಈ ಹಿಂದೆಯೇ ಸಾಧಿಸಬಹುದಾಗಿತ್ತು. ಉದ್ಯಮಶೀಲತೆ ಕೌಶಲ್ಯ ಹೊಂದಿರುವ ಯುವಕರು ಈ ಗುರಿಯನ್ನು ಸಾಧಿಸುವಲ್ಲಿ ದೊಡ್ಡ ಪಾತ್ರ ವಹಿಸಲಿದ್ದಾರೆ” ಎಂದು ಅವರು ಹೇಳಿದ್ದಾರೆ.
ನಿರುದ್ಯೋಗ ಮತ್ತು ಆರ್ಥಿಕ ಕುಸಿತದ ಬಗ್ಗೆ ಕೇಂದ್ರವನ್ನು ಗುರಿಯಾಗಿಸಿಕೊಂಡಿರುವ ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಅವರು, “ಕೆಲವರು ಯಾವಾಗಲೂ ವಿಷಯಗಳನ್ನು ನಕಾರಾತ್ಮಕ ದೃಷ್ಟಿಯ ಮೂಲಕ ನೋಡುತ್ತಾರೆ” ಎಂದಿದ್ದಾರೆ.
“ಅವರು ಉದ್ಯೋಗದ ಬಗ್ಗೆ ಕೇಳಿದಾಗಲೆಲ್ಲಾ, ನೀವು 60 ವರ್ಷಗಳ ಕಾಲ ದೇಶವನ್ನು ಆಳಿದ್ದೀರಿ ಆದರೆ ದೇಶದ ಯುವಕರಿಗೆ ಉದ್ಯೋಗ ಒದಗಿಸಲು ನೀವು ಯಾವ ಕ್ರಮಗಳನ್ನು ತೆಗೆದುಕೊಂಡಿದ್ದೀರಿ ಎಂಬ ಪ್ರಶ್ನೆ ನಮ್ಮೊಳಗೆ ಮೂಡುತ್ತದೆ” ಎಂದು ಶಾ ಪ್ರಶ್ನಿಸಿದ್ದಾರೆ.
ತಮ್ಮ ಸರ್ಕಾರ ಕೈಗೊಂಡ ಪ್ರಯತ್ನಗಳ ಬಗ್ಗೆ ಮಾತನಾಡಿದ ಶಾ, ಯುವಕರಿಗೆ ಉದ್ಯೋಗಾವಕಾಶಗಳನ್ನು ತರಲು ಅಗತ್ಯವಿರುವ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಎಂದಿದ್ದಾರೆ.
“ಇಂಡಿಯನ್ ಇನ್ಸ್ಟಿಟ್ಯೂಶನ್ ಆಫ್ ಸ್ಕಿಲ್ಸ್ ಯುವಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವ ಸಲುವಾಗಿ ಕೌಶಲ್ಯಗಳನ್ನು ಕಲಿಸಿಕೊಡುತ್ತದೆ, ದೇಶದ ಯುವಜನರು ಉದ್ಯೋಗಾಕಾಂಕ್ಷಿಗಳಿಂದ ಉದ್ಯೋಗ ಸೃಷ್ಟಿಕರ್ತರಾಗುವ ಮೂಲಕ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ” ಎಂದು ಶಾ ಭರವಸೆ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.