ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಇಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಈ ಪ್ರಕ್ರಿಯೆ ನಡೆದಿದೆ. ಈ ಹುದ್ದೆಗೆ ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ, ನಳಿನ್ ಕುಮಾರ್ ಕಟೀಲ್ ಅವರು ಸಲ್ಲಿಸಿದ ಏಕೈಕ ನಾಮಪತ್ರವನ್ನು ಅಂಗೀಕರಿಸಲಾಯಿತು ಮತ್ತು ದಕ್ಷಿಣ ಕನ್ನಡ ಸಂಸದರನ್ನು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪೂರ್ಣ ಅವಧಿಗೆ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಚುನಾವಣಾ ಅಧಿಕಾರಿಯಾಗಿ ಸಿ ಟಿ ರವಿ ಅವರು ಚುನಾವಣೆಯನ್ನು ಮುನ್ನಡೆಸಿದರು. ಪ್ರಕ್ರಿಯೆ ಮುಕ್ತಾಯವಾದ ಬಳಿಕ ಸರ್ವಾನುಮತದ ಚುನಾವಣೆಯ ಆಯ್ಕೆಯನ್ನು ಘೋಷಣೆ ಮಾಡಿದರು. ಕಟೀಲ್ಗೆ ಪ್ರಮಾಣಪತ್ರವನ್ನು ಹಸ್ತಾಂತರಿಸಲಾಯಿತು ಮತ್ತು ಈ ಸಾಧನೆಗೆ ಅವರನ್ನು ಅಭಿನಂದಿಸಲಾಯಿತು. ಬಿಜೆಪಿಯ ಮತ್ತೋರ್ವ ಚುನಾವಣಾ ಅಧಿಕಾರಿಯಾಗಿ ಅಶ್ವತ್ ನಾರಾಯಣ್ ಗೌಡ, ಜಂಟಿ ಚುನಾವಣಾ ಅಧಿಕಾರಿಯಾಗಿ ಹಾಲಪ್ಪ ಆಚಾರ್ ಮತ್ತು ಹಲವಾರು ಶಾಸಕರು ಉಪಸ್ಥಿತರಿದ್ದರು.
ಕಟೀಲ್ ಅವರ ಅವಧಿ 2020 ರ ಜನವರಿ 16 ರಿಂದ 2023 ರ ಜನವರಿ 16 ರವರೆಗೆ ಇರಲಿದೆ. ಪಕ್ಷದ ಸಂವಿಧಾನದ ಪ್ರಕಾರ ಚುನಾವಣೆ ನಡೆದಿದೆ. ಮುಂದಿನ ವಿಧಾನಸಭಾ ಚುನಾವಣೆಯವರೆಗೂ ಕಟೀಲ್ ರಾಜ್ಯಾಧ್ಯಕ್ಷರಾಗಿ ಮುಂದುವರಿಯಲಿದ್ದಾರೆ.
ರಾಜ್ಯಾಧ್ಯಕ್ಷರಾಗಿ ಮಾತನಾಡಿದ ನಳಿನ್ ಕುಮಾರ್ ಕಟೀಲ್ ಅವರು, “ಆರಂಭದಲ್ಲಿ ಜನರಿಗೆ ರಾಜ್ಯದ ಕರಾವಳಿ ಪ್ರದೇಶದ ವ್ಯಕ್ತಿಯೊಬ್ಬರಿಗೆ ಈ ಹುದ್ದೆಯನ್ನು ನಿರ್ವಹಿಸಲು ಸಾಧ್ಯವಾಗುತ್ತದೆ ಎಂಬ ವಿಶ್ವಾಸವಿರಲಿಲ್ಲ. ನಾನು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಪ್ರಯಾಣಿಸಿದ್ದೇನೆ. ಮುಂದೆ ನಾವು ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ನಿರ್ವಹಿಸಬೇಕಾಗಿದೆ. 80 ರಷ್ಟು ಸ್ಥಾನ ಗೆಲ್ಲುವುದು ಗೆಲ್ಲುವುದು ನಮ್ಮ ಗುರಿ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಾವು 150 ಸ್ಥಾನಗಳನ್ನು ಗೆದ್ದು ಮತ್ತೆ ಅಧಿಕಾರಕ್ಕೆ ಏರುತ್ತೇವೆ. ಗುಜರಾತ್ ಮಾದರಿಯಲ್ಲಿ ನಾವು ಪಕ್ಷವನ್ನು ನಿರ್ಮಿಸುತ್ತೇವೆ “ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.