ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಬಿಜೆಪಿ ಮತ್ತು ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಮೈತ್ರಿ ಮಾಡಿಕೊಂಡಿದೆ. ಉಭಯ ಪಕ್ಷಗಳ ನಾಯಕರುಗಳು ಸುದೀರ್ಘ ಸಮಯದಿಂದ ಮಾತುಕತೆಯನ್ನು ನಡೆಸಿ ಮೈತ್ರಿ ಒಪ್ಪಂದ ಮಾಡಿಕೊಂಡಿದ್ದಾರೆ.
ಜನಸೇನಾ ಮುಖ್ಯಸ್ಥ ಮತ್ತು ತೆಲುಗು ಚಲನಚಿತ್ರ ನಟ-ರಾಜಕಾರಣಿ ಪವನ್ ಕಲ್ಯಾಣ್ ಮತ್ತು ಆಂಧ್ರಪ್ರದೇಶದ ಬಿಜೆಪಿ ಅಧ್ಯಕ್ಷ ಕನ್ನ ಲಕ್ಷ್ಮಿ ನಾರಾಯಣ ಅವರು ವಿಜಯವಾಡದಲ್ಲಿ ನಡೆಸಿದದ ಸಭೆಯಲ್ಲಿ ಮೈತ್ರಿ ಘೋಷಿಸಲಾಯಿತು. ಜಾತಿವಾದಿ, ಪರಿವಾರವಾದ ಮತ್ತು ಭ್ರಷ್ಟ ಶಕ್ತಿಯನ್ನು ಕೊನೆಗೊಳಿಸಲು ಕೆಲಸ ಮಾಡುವುದಾಗಿ ಅವರು ಹೇಳಿದರು.
ಈ ಮೈತ್ರಿ ಖಂಡಿತವಾಗಿಯೂ 2024 ರಲ್ಲಿ ರಾಜ್ಯದಲ್ಲಿ ಅಧಿಕಾರವನ್ನು ಪಡೆಯುತ್ತದೆ ಎಂದು ನಾಯಕರುಗಳು ಪ್ರತಿಪಾದಿಸಿದ್ದಾರೆ.
“ಮುಂಬರುವ ಚುನಾವಣೆಗಳಿಂದ ಸ್ಥಳೀಯ ಸಂಸ್ಥೆಗಳವರೆಗೆ 2024 ರ ಸಾರ್ವತ್ರಿಕ ಚುನಾವಣೆಯವರೆಗೆ ರಾಜ್ಯದ ಸುಧಾರಣೆಗಾಗಿ ನಮ್ಮ ಮೈತ್ರಿ ಒಟ್ಟಾಗಿ ಹೋರಾಡುತ್ತದೆ. ನಮ್ಮ ಮೈತ್ರಿ ರಾಜ್ಯವನ್ನು ರಕ್ಷಿಸುವ ಉದ್ದೇಶವನ್ನು ಹೊಂದಿದೆ”ಎಂದು ಅವರು ಹೇಳಿದ್ದಾರೆ.
ಬಿಜೆಪಿ ರಾಜ್ಯ ಉಸ್ತುವಾರಿ ಸುನಿಲ್ ದೇವಧರ್ ಅವರು, ಟಿಡಿಪಿಯೊಂದಿಗೆ ಮರು ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಒತ್ತಿ ಹೇಳಿದ್ದಾರೆ.
ನವದೆಹಲಿಯಲ್ಲಿ ಸೋಮವಾರ ಪವನ್ ಕಲ್ಯಾಣ್ ಅವರು ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆ ಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.