ಬೆಂಗಳೂರು: ಕರ್ನಾಟಕದಲ್ಲಿ ಮತ್ತು ಹೊರ ರಾಜ್ಯಗಳಲ್ಲಿ ದುಷ್ಕೃತ್ಯವನ್ನು ನಡೆಸಲು ಸಂಚು ರೂಪಿಸುತ್ತಿದ್ದ ಶಂಕಿತ ಉಗ್ರಗಾಮಿ ಮೆಹಬೂಬ್ ಪಾಷಾನನ್ನು ಸಿಸಿಬಿ ಮತ್ತು ರಾಜ್ಯ ಗುಪ್ತದಳ ಜಂಟಿ ಕಾರ್ಯಾಚರಣೆಯನ್ನು ನಡೆಸಿ ಬಂಧಿಸಿದೆ.
ಇತ್ತೀಚಿಗಷ್ಟೇ ತಮಿಳುನಾಡು ಪೊಲೀಸರು ಬೆಂಗಳೂರಿನಲ್ಲಿ ಮೂವರು ಶಂಕಿತ ಭಯೋತ್ಪಾದಕರನ್ನು ಬಂಧಿಸಿದ್ದರು. ಈ ಬಳಿಕ ಮೊಹಬೂಬ್ ಪಾಷಾ ಮತ್ತು ಆತನ 16 ಮಂದಿ ಸಹಚರರು ತಲೆಮರೆಸಿಕೊಂಡಿದ್ದಾರೆ. ಇವರುಗಳ ವಿರುದ್ಧ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕಾರ್ಯಾಚರಣೆಯನ್ನು ನಡೆಸಿ ಮೊಹಬೂಬ್ ಪಾಷಾನನ್ನು ಬಂಧನಕ್ಕೊಳಪಡಿಸಲಾಗಿದೆ ಮತ್ತು ಆತನನ್ನು ಅಜ್ಞಾತ ಸ್ಥಳದಲ್ಲಿ ವಿಚಾರಣೆಗೆ ಒಳಪಡಿಸಲಾಗಿದೆ. ಈತನಿಗೆ ಇಸಿಸ್ ಉಗ್ರ ಸಂಘಟನೆಯೊಂದಿಗೆ ನಂಟಿದೆ ಎಂದು ಹೇಳಲಾಗುತ್ತಿದೆ. ‘ಅಲ್ ಹಿಂದ್’ ಎಂಬ ಟ್ರಸ್ಟ್ ಸ್ಥಾಪನೆ ಮಾಡಿ ಅದರ ಮೂಲಕ ಜಿಹಾದಿ ಕೃತ್ಯಗಳನ್ನು ಹರಡುವುದು ಈತನ ಸಂಚಾಗಿತ್ತು ಎನ್ನಲಾಗಿದೆ.
ಕಳೆದ ಕೆಲವು ದಿನಗಳಿಂದ ದೆಹಲಿ, ಬೆಂಗಳೂರು ನಗರಗಳಲ್ಲಿ ಹಲವಾರು ಶಂಕಿತ ಭಯೋತ್ಪಾದಕರನ್ನು ಬಂಧಕ್ಕೊಳಪಡಿಸಲಾಗಿದೆ. ಇವರನ್ನು ತೀವ್ರ ವಿಚಾರಣೆಗೊಳಪಡಿಸಲಾಗಿದ್ದು ಭಯೋತ್ಪಾದನೆಗೆ ಸಂಬಂಧಿಸಿದಂತೆ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.