ಲಕ್ನೋ: ಉತ್ತರಪ್ರದೇಶದ ಮುಜಫರನಗರ್ ಜಿಲ್ಲೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸ್ ಪಡೆಗಳ ಮೇಲೆ ಕಲ್ಲು ಎಸೆಯಲು ಮಕ್ಕಳನ್ನು ಪ್ರಚೋದಿಸಿದ ಆರೋಪದ ಮೇರೆಗೆ 33 ಜನರ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಎಲ್ಲಾ 33 ಅಪರಾಧಿಗಳನ್ನೂ ಈ ಹಿಂದೆ ಐಪಿಸಿಯ ವಿವಿಧ ವಿಭಾಗಗಳ ಅಡಿಯಲ್ಲಿ ದೂರು ದಾಖಲಿಸಿ ಜೈಲಿಗೆ ಕಳುಹಿಸಲಾಗಿತ್ತು. ಇದೀಗ ರಾಜ್ಯ ಸರ್ಕಾರವು ನೇಮಿಸಿದ ವಿಶೇಷ ತನಿಖಾ ತಂಡವು 2015 ರ ಬಾಲಾಪರಾಧಿ ನ್ಯಾಯ (ಮಕ್ಕಳ ಆರೈಕೆ ಮತ್ತು ಸಂರಕ್ಷಣೆ) ಕಾಯ್ದೆಯ ಹಲವು ವಿಭಾಗಗಳ ಅಡಿಯಲ್ಲಿ ಅವರ ವಿರುದ್ಧ ಪ್ರಕರಣವನ್ನು ದಾಖಲು ಮಾಡಿದೆ.
ಮುಖ್ಯವಾಗಿ, ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಸಮಯದಲ್ಲಿ ಹಲವಾರು ಅಪ್ರಾಪ್ತ ಬಾಲಕರು ಕಾನೂನು ಪಾಲನೆ ಮಾಡುತ್ತಿದ್ದ ಅಧಿಕಾರಿಗಳ ಮೇಲೆ ಕಲ್ಲು ತೂರಾಟ ನಡೆಸಿರುವುದು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸುತ್ತಿರುವುದು ಕಂಡುಬಂದಿದೆ.
ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ರವಿಕಾಂತ್ ಯಾದವ್ ಅವರ ಅನುಮತಿಯ ನಂತರ ಬಾಲಾಪರಾಧಿ (ಮಕ್ಕಳ ಆರೈಕೆ ಮತ್ತು ಸಂರಕ್ಷಣೆ) ಕಾಯ್ದೆ 2015ರ ಅಡಿಯಲ್ಲಿ ಈ ಪ್ರಕರಣಗಳನ್ನು ವಿಚಾರಣೆಗೆ ಒಳಪಡಿಸಲಾಯಿತು.
ಭಾರತೀಯ ಅಪರಾಧ ಸಂಹಿತೆಯಲ್ಲಿ (ಐಪಿಸಿ) ಬಾಲಪರಾಧಿಗಳ ವಿರುದ್ಧ ಪ್ರಕರಣ ದಾಖಲಿಸಲು ಬರವುದಿಲ್ಲ, ಆದರೆ ಬಾಲಾಪರಾಧಿ ಕಾಯ್ದೆ, 2015 ರ ಅಡಿಯಲ್ಲಿ ಇದಕ್ಕೆ ಅವಕಾಶವಿದೆ. ಇದು ಉಗ್ರಗಾಮಿ ಗುಂಪುಗಳು ಮಕ್ಕಳನ್ನು ಬಳಸುವುದು, ಮಾರಾಟ ಮತ್ತು ನಿಯೋಜನೆ, ಅಕ್ರಮ ದತ್ತು ಮತ್ತು ಅಂಗವಿಕಲ ಮಕ್ಕಳ ವಿರುದ್ಧದ ಅಪರಾಧಗಳು ಸೇರಿದಂತೆ ಯಾವುದೇ ಉದ್ದೇಶಕ್ಕಾಗಿ ಮಕ್ಕಳ ಬಳಕೆಯನ್ನು ಇದು ನಿರ್ವಹಿಸುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.