ಬೆಂಗಳೂರು: ಎಸ್ಡಿಪಿಐ ಸಂಘಟನೆಯನ್ನು ನಿಷೇಧಿಸಬೇಕು ಮತ್ತು ಅದರ ಸಮಾಜ ಘಾತುಕ ಕೃತ್ಯಗಳ ಬಗ್ಗೆ ಕೇಂದ್ರ ಸರ್ಕಾರ ಗಮನ ಹರಿಸಬೇಕು ಎಂದು ಸಚಿವ ಜಗದೀಶ್ ಶೆಟ್ಟರ್ ಅವರು ಮನವಿ ಮಾಡಿದ್ದಾರೆ.
ಸಿಎಎ ಪರವಾದ ಸಮಾವೇಶದ ಸಂದರ್ಭದಲ್ಲಿ ಆರ್ ಎಸ್ ಎಸ್ ಸದಸ್ಯರೊಬ್ಬರ ಮೇಲೆ ಹಲ್ಲೆ ನಡೆಸಿದ್ದ ಆರೋಪದ ಮೇಲೆ ಎಸ್ಡಿಪಿಐ ಕಾರ್ಯಕರ್ತರ ಬಂಧನವಾದ ಹಿನ್ನಲೆಯಲ್ಲಿ ಅವರು ಈ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಆರೋಪಿಗಳು ಚಕ್ರವರ್ತಿ ಸೂಲಿಬೆಲೆ ಮತ್ತು ಸಂಸದ ತೇಜಸ್ವಿ ಸೂರ್ಯನನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದರು ಎನ್ನಲಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶೆಟ್ಟರ್, “ಎಸ್ಡಿಪಿಐ ಪ್ರತಿ ಸಲವೂ ತನ್ನ ಭಾಗಿಯನ್ನು ಅಲ್ಲಗೆಳೆಯುತ್ತದೆ, ಆದರೆ ಈ ಬಾರಿ ಅವರ ಕೃತ್ಯ ಸಾಬೀತಾಗಿದೆ. ನಾನು ಪೊಲೀಸರ ಕ್ರಮವನ್ನು ಸ್ವಾಗತಿಸುತ್ತೇನೆ. ಸಮಾಜ ಘಾತುಕ ಕೃತ್ಯಗಳಲ್ಲಿ ಆ ಸಂಘಟನೆ ಭಾಗಿಯಾಗುತ್ತಿರುವುದನ್ನು ಅದನ್ನು ನಿಷೇಧಿಸಬೇಕು, ಕೇಂದ್ರ ಸರ್ಕಾರ ಅದರ ಕೃತ್ಯಗಳ ಬಗ್ಗೆ ಗಮನ ಹರಿಸಬೇಕು” ಎಂದಿದ್ದಾರೆ.
ಬಂಧಿತ ಎಸ್ಡಿಪಿಐ ಕಾರ್ಯಕರ್ತರು ತಾವು ನಡೆಸಿದ ಸಂಚಿನ ಬಗ್ಗೆ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.