ನವದೆಹಲಿ : ದೇಶಾದ್ಯಂತ ಜೂನ್ 1 ರೊಳಗೆ ‘ಒನ್ ನೇಷನ್, ಒನ್ ರೇಷನ್ ಕಾರ್ಡ್’ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಸೋಮವಾರ ಹೇಳಿದರು.
ಆಂಧ್ರಪ್ರದೇಶ, ಹರಿಯಾಣ, ಕರ್ನಾಟಕ, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ತೆಲಂಗಾಣ, ತ್ರಿಪುರ, ಗುಜರಾತ್ ಮತ್ತು ಜಾರ್ಖಂಡ್ ಸೇರಿದಂತೆ 16 ರಾಜ್ಯಗಳಲ್ಲಿ ಈ ಯೋಜನೆಯನ್ನು ಈಗಾಗಲೇ ಪ್ರಾರಂಭಿಸಲಾಗಿದೆ ಎಂದು ಪಾಸ್ವಾನ್ ಪ್ರಕಟಿಸಿದರು. ಆದರೆ, ಈ ಯೋಜನೆಯನ್ನು ಬಿಹಾರ ಮತ್ತು ಉತ್ತರಪ್ರದೇಶದಲ್ಲಿ ಇನ್ನು ಪ್ರಾರಂಭಿಸಬೇಕಾಗಿದೆ ಎಂದು ಅವರು ಹೇಳಿದರು.
ಪಾಸ್ವಾನ್ ಅವರ ಪ್ರಕಾರ, ‘ಒನ್ ನೇಷನ್, ಒನ್ ರೇಷನ್ ಕಾರ್ಡ್’ ಯೋಜನೆಯು ದೇಶಾದ್ಯಂತದ ಕಾರ್ಮಿಕರು ಮತ್ತು ಬಡವರಿಗೆ ಪ್ರಯೋಜನಗಳನ್ನು ನೀಡಲಿದೆ. 81 ಕೋಟಿ ಜನರು ಈ ಯೋಜನೆಯಿಂದ ಪ್ರಯೋಜನ ಪಡೆಯುತ್ತಾರೆ ಏಕೆಂದರೆ ಅವರು ಗೋಧಿಯನ್ನು ಕೆ.ಜಿ.ಗೆ 2 ರೂ. ಮತ್ತು ಅಕ್ಕಿಯನ್ನು ಕೆ.ಜಿ.ಗೆ 3 ರೂ.ಗೆ ಪಡೆಯಲಿದ್ದಾರೆ. ಈ ಯೋಜನೆಯಡಿ ಫಲಾನುಭವಿಯು ತನ್ನಲ್ಲಿನ ರೇಷನ್ ಕಾರ್ಡ್ ಬಳಸಿ ದೇಶಾದ್ಯಂತದ ಯಾವುದೇ ಭಾಗದಲ್ಲೂ ಪ್ರಯೋಜನಗಳನ್ನು ಪಡೆಯಲು ಈ ಯೋಜನೆಯಡಿ ಅವಕಾಶ ನೀಡಲಾಗುವುದು ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.
ಈ ಯೋಜನೆಯು ವಲಸೆ ಕಾರ್ಮಿಕರಿಗೆ ಮತ್ತು ದೈನಂದಿನ ಕೂಲಿ ಕಾರ್ಮಿಕರಿಗೆ ಪ್ರಯೋಜನಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ, ಏಕೆಂದರೆ ಅರ್ಹ ಫಲಾನುಭವಿಗಳಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಯಾವುದೇ ನ್ಯಾಯಯುತ ಬೆಲೆ ಅಂಗಡಿಯಿಂದ (ಎಫ್ಪಿಎಸ್) ಅದೇ ಪಡಿತರ ಚೀಟಿ ಬಳಸಿ ಸಬ್ಸಿಡಿ ದರದಲ್ಲಿ ತಮ್ಮ ಅರ್ಹ ಆಹಾರ ಧಾನ್ಯಗಳನ್ನು ಪಡೆಯಲು ಅವಕಾಶ ನೀಡುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.