ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ 370 ನೇ ವಿಧಿಯನ್ನು ನಿಮೂರ್ಲನೆ ಮಾಡುವ ಭರವಸೆಯನ್ನು ಈಡೇರಿಸಿದ ಬಿಜೆಪಿ ಪಕ್ಷದ ಮುಂದಿನ ಉದ್ದೇಶವೆಂದರೆ ಕಾಶ್ಮೀರಿ ಪಂಡಿತರು ಕಣಿವೆಗೆ ಮರಳುವುದನ್ನು ಖಚಿತಪಡಿಸುವುದು.
ಭಯೋತ್ಪಾದಕ ದಾಳಿಗಳು ಮತ್ತು ಉಗ್ರಗಾಮಿ ಗುಂಪುಗಳ ನೇತೃತ್ವದಲ್ಲಿ ಪ್ರತ್ಯೇಕತಾವಾದಿ ಚಳವಳಿಯು ತೀವ್ರ ಸ್ವರೂಪ ಪಡೆದ ನಂತರ 400,000 ಜನಸಂಖ್ಯೆಯ ಪಂಡಿತ ಸಮುದಾಯದ ದೊಡ್ಡ ವರ್ಗ 1990 ರ ಜನವರಿಯಲ್ಲಿ ಕಾಶ್ಮೀರವನ್ನು ತೊರೆಯಬೇಕಾಯಿತು. ಬೆರಳೆಣಿಕೆಯಷ್ಟು ಪಂಡಿತರು ಮಾತ್ರ ಈಗ ಕಣಿವೆಯಲ್ಲಿ ವಾಸಿಸುತ್ತಿದ್ದಾರೆ.
ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಜಮ್ಮು ಮತ್ತು ಕಾಶ್ಮೀರದ ಉಸ್ತುವಾರಿಯಾದ ರಾಮ್ ಮಾಧವ್ ಅವರು, ಕಾಶ್ಮೀರಿ ಪಂಡಿತರು ಕಣಿವೆಗೆ ಅತ್ಯಂತ ಘನತೆಯುತವಾಗಿಯೇ ಮರಳಲಿದ್ದಾರೆ ಎಂಬ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ. ಜಮ್ಮು ಕಾಶ್ಮೀರ ಎರಡು ಕೇಂದ್ರಾಡಳಿತ ಭೂಪ್ರದೇಶಗಳಾಗಿ ವಿಭಜಿಸಲ್ಪಟ್ಟ ನಂತರ ಆ ಪ್ರದೇಶದಲ್ಲಿ ಮಹಾನ್ ಪರಿವರ್ತನೆಗಳು ನಡೆಯುತ್ತಿದೆ ಮತ್ತು ಪಂಡಿತ ಸಮುದಾಯ ನಾಯಕತ್ವದೊಂದಿಗೆ ಸಮಾಲೋಚನೆಯ ನಂತರವೇ ಪಂಡಿತರನ್ನು ಕಣಿವೆಗೆ ಹಿಂದಿರುಗಿಸುವ ಪ್ರಕ್ರಿಯೆಯು ಪ್ರಾರಂಭವಾಗುತ್ತದೆ ಎಂದಿದ್ದಾರೆ.
“ಕಳೆದ ಮೂರು ದಶಕಗಳಲ್ಲಿ ಕಾಶ್ಮೀರಿ ಪಂಡಿತರು ಬಹಳ ದುರದೃಷ್ಟಕರ ಸನ್ನಿವೇಶವನ್ನು ಎದುರಿಸಿದ್ದಾರೆ. ಇಡೀ ಜಮ್ಮು ಮತ್ತು ಕಾಶ್ಮೀರ ರಾಜ್ಯವೂ ಸಹ ಕಳೆದ ಏಳು ದಶಕಗಳಿಂದ ಇದೇ ಸನ್ನಿವೇಶದ ಮೂಲಕ ಹಾದುಹೋಯಿತು. ಈಗ, ಪ್ರಮುಖ ರೂಪಾಂತರವು ನಡೆಯುತ್ತಿದೆ ಮತ್ತು ಈ ರೂಪಾಂತರವು ಪಂಡಿತರು ಸೇರಿದಂತೆ ಎಲ್ಲಾ ವರ್ಗಗಳಿಗೆ ಸಹಾಯ ಮಾಡುತ್ತದೆ ಎಂದು ನಮಗೆ ಖಾತ್ರಿಯಿದೆ”ಎಂದು ಅವರು ಹೇಳಿದ್ದಾರೆ.
ಕಾಶ್ಮೀರಿ ಪಂಡಿತರ ಒಂದು ವರ್ಗವು ಕಣಿವೆಯೊಳಗೆ ಪ್ರತ್ಯೇಕ ತಾಯ್ನಾಡು ಬೇಕು ಎಂದು ಒತ್ತಾಯಿಸುತ್ತಿದ್ದರೆ, ಇನ್ನೊಂದು ವರ್ಗದ ಮುಖಂಡರು ತಮ್ಮ ಪುನರ್ವಸತಿ ಯೋಜನೆಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಕಣಿವೆಯಲ್ಲಿ ಸುರಕ್ಷಿತವಾಗಿ ಬದುಕು ಕಟ್ಟಿಕೊಳ್ಳುವುದು ಅಸಾಧ್ಯ ಎಂಬುದು ಇವರ ವಾದ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.