ಬೆಂಗಳೂರು: ಉಡಾನ್ (ಉಡೆ ದೇಶ್ ಕಾ ಆಮ್ ನಾಗರಿಕ್) ಪ್ರಾದೇಶಿಕ ಸಂಪರ್ಕ ಯೋಜನೆಯಡಿ ಕರ್ನಾಟಕದಲ್ಲಿ ಕಾರ್ಯಾಚರಣೆ ನಡೆಸುವ ಮುಂದಿನ ವಿಮಾನ ನಿಲ್ದಾಣ ಬೀದರ್ ಆಗಲಿದೆ. ಬೀದರ್ ವಿಮಾನ ನಿಲ್ದಾಣದಲ್ಲಿ ಮೊದಲ ವಿಮಾನ ಕಾರ್ಯಾಚರಣೆ ಕೆಲವೇ ವಾರಗಳಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕದಾದ್ಯಂತ ಐದು ವಿಮಾನ ನಿಲ್ದಾಣಗಳು ಎರಡು ವರ್ಷಗಳ ಅವಧಿಯಲ್ಲಿ ಕಾರ್ಯರೂಪಕ್ಕೆ ಬರುವ ನಿರೀಕ್ಷೆಯಿದೆ. ಇವುಗಳಲ್ಲಿ ಬೀದರ್ ಹೊರತುಪಡಿಸಿ ವಿಜಯಪುರ, ಶಿವಮೊಗ್ಗ, ಕಾರವಾರ, ಹಾಸನ / ಚಿಕ್ಕಮಗಳೂರು ವಿಮಾನ ನಿಲ್ದಾಣಗಳು ಕೂಡ ಸೇರಿದೆ.
ಕೇಂದ್ರ ನಾಗರಿಕ ವಿಮಾನಯಾನ ಕಾರ್ಯದರ್ಶಿ ಪ್ರದೀಪ್ ಸಿಂಗ್ ಖರೋಲಾ ಈ ಘೋಷಣೆ ಮಾಡಿದ್ದಾರೆ.
“ಬೆಂಗಳೂರು ಭಾರತದ ವಾಯುಯಾನ ರಾಜಧಾನಿಯಾಗುವ ಸಾಮರ್ಥ್ಯವನ್ನು ಹೊಂದಿದೆ. ನಾವು ಈಗ ಕರ್ನಾಟಕದ ಎಲ್ಲಾ ದಿಕ್ಕುಗಳಲ್ಲಿಯೂ ವಿಮಾನ ನಿಲ್ದಾಣಗಳನ್ನು ಹೊಂದಿದ್ದೇವೆ. ಕೆಲವು ತಿಂಗಳ ಹಿಂದೆ ಕಾರ್ಯರೂಪಕ್ಕೆ ಬಂದಿದ್ದ ಕಲಬುರಗಿ ವಿಮಾನ ನಿಲ್ದಾಣಕ್ಕೆ ಪ್ರತಿಕ್ರಿಯೆ ತುಂಬಾ ಉತ್ತಮವಾಗಿದೆ” ಎಂದು ಖರೋಲಾ ಹೇಳಿದ್ದಾರೆ.
ಇತರ ನಾಲ್ಕು ಉಡಾನ್ ವಿಮಾನ ನಿಲ್ದಾಣಗಳ ಕೆಲಸವನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ವಿವಿಧ ಏಜೆನ್ಸಿಗಳು ಮತ್ತು ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರದ ಸಹಯೋಗದೊಂದಿಗೆ ಕೈಗೊಳ್ಳಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.