ಲಕ್ನೋ: ಪೌರತ್ವ ಕಾನೂನನ್ನು ವಿರೋಧಿಸುವವರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬುಧವಾರ ಎಚ್ಚರಿಕೆ ನೀಡಿದ್ದು, ಇಂತಹ ಪ್ರತಿಭಟನೆಗಳಲ್ಲಿ “ಆಜಾದಿ” ಘೋಷಣೆಗಳನ್ನು, ದೇಶದ್ರೋಹದ ಘೋಷಣೆಗಳನ್ನು ಕೂಗಿದರೆ ಕಠಿಣ ಕ್ರಮವನ್ನು ತೆಗೆದುಕೊಳ್ಳುವುದಾಗಿ ಅವರು ಹೇಳಿದ್ದಾರೆ.
ಕಾನ್ಪುರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಪರವಾದ ಸಮಾರಂಭದಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್ ಅವರು, “ಯಾರಾದರೂ ಪ್ರತಿಭಟನೆಯ ಹೆಸರಿನಲ್ಲಿ ಆಜಾದಿಯ ಘೋಷಣೆಗಳನ್ನು ಎತ್ತಿದರೆ ಅದು ದೇಶದ್ರೋಹವಾಗುತ್ತದೆ ಮತ್ತು ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತದೆ. ಇದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಭಾರತದ ನೆಲದಿಂದ ಭಾರತದ ವಿರುದ್ಧ ಪಿತೂರಿ ನಡೆಸಲು ಜನರಿಗೆ ನಾವು ಅನುಮತಿಸುವುದಿಲ್ಲ” ಎಂದಿದ್ದಾರೆ.
ಅಲ್ಲದೇ, ಲಕ್ನೋದ ಐಕಾನಿಕ್ ಟವರ್ ಕ್ಲಾಕ್ ಸಮೀಪ ನಡೆಯುತ್ತಿರುವ ಪ್ರತಿಭಟನೆಯ ಬಗ್ಗೆ ಮಾತನಾಡಿದ ಅವರು, “ಮಹಿಳೆಯರೇ ಯಾಕೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ?. ಪುರುಷರು ಮನೆಯಲ್ಲಿ ಬೆಚ್ಚನೆ ಮಲಗಿ ಮಹಿಳೆಯರನ್ನು ಬೀದಿಯಲ್ಲಿ ಪ್ರತಿಭಟಿಸುವಂತೆ ಮಾಡುತ್ತಿದ್ದಾರೆ” ಎಂದಿದ್ದಾರೆ.
“ಮಹಿಳೆಯರನ್ನು ಮುಂದಕ್ಕೆ ದೂಡಿ ಇಂತಹ ರಾಜಕೀಯ ಮಾಡುತ್ತಿರುವ ಸಮಾಜವಾದಿ, ಕಾಂಗ್ರೆಸ್ ಮತ್ತು ಎಡಪಕ್ಷಗಳಿಗೆ ನಾಚಿಗೆಯಾಗಬೇಕು. ಪ್ರತಿಭಟಿಸುವ ಹಲವರಿಗೆ ಸಿಎಎ ಏನೆಂದೇ ಗೊತ್ತಿಲ್ಲ” ಎಂದಿದ್ದಾರೆ.
ಸಿಎಎ ವಿರುದ್ಧ ಕೆಲವು ಕಡೆಗಳಲ್ಲಿ ಪ್ರತಿಭಟನೆಗಳು ನಿತ್ಯ ನಡೆಯುತ್ತಿದೆ. ಆದರೆ ಯಾರು ಎಷ್ಟೇ ಪ್ರತಿಭಟನೆ ನಡೆಸಿದರೂ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಾಪಾಸ್ ಪಡೆಯುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.