ತಿರುವನಂತಪುರಂ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅನುಷ್ಠಾನಗೊಳಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಯನ್ನು ಬೆಂಬಲಿಸಿದ್ದಕ್ಕಾಗಿ ಕೇರಳದ ಕುಟ್ಟಿಪುರಂನಲ್ಲಿನ ಹಿಂದೂ ಜನಸಂಖ್ಯೆ ಇರುವ ಪ್ರದೇಶಕ್ಕೆ ಸೇರಿದ ಬಡ ನಿವಾಸಿಗಳಿಗೆ ಕುಡಿಯುವ ನೀರು ನಿರಾಕರಿಸಲಾಗಿದೆ ಎಂದು ಜನಮ್ ಟಿವಿ ವರದಿ ಮಾಡಿದೆ.
ಪ್ರದೇಶದ ಸಮೀಪ ವಾಸಿಸುವ ವ್ಯಕ್ತಿಯೊಬ್ಬನಿಗೆ ಕುಡಿಯುವ ನೀರನ್ನು ಪೂರೈಸುವ ಜವಾಬ್ದಾರಿಯನ್ನು ವಹಿಸಲಾಗಿತ್ತು, ಆದರೆ ನಿವಾಸಿಗಳು ಸಿಎಎಗೆ ಬೆಂಬಲ ನೀಡುತ್ತಿದ್ದಾರೆ ಎಂಬುದನ್ನು ತಿಳಿದ ವ್ಯಕ್ತಿಯು ಅವರಿಗೆ ನೀರನ್ನು ಸರಬರಾಜು ಮಾಡದೆ ದರ್ಪ ಮೆರೆದಿದ್ದಾನೆ ಎಂದು ಹೇಳಲಾಗಿದೆ.
ಸೇವಾಭಾರತಿ ಕಾರ್ಯಕರ್ತರು ನಿವಾಸಿಗಳ ರಕ್ಷಣೆಗೆ ಧಾವಿಸಿ ಅವರಿಗೆ ಕುಡಿಯುವ ನೀರನ್ನು ಪೂರೈಕೆ ಮಾಡಿದ್ದಾರೆ.
ಸಿಎಎ ಜಾರಿಗೆ ಬಂದ ಕೂಡಲೇ, ಕೇರಳ ರಾಜ್ಯವು ದೊಡ್ಡ ಪ್ರಮಾಣದ ಪ್ರತಿಭಟನೆಗಳಿಗೆ ಸಾಕ್ಷಿಯಾಯಿತು, ಈ ಪ್ರತಿಭಟನೆಗಳಿಗೆ ಮೂಲಭೂತವಾದಿ ಇಸ್ಲಾಮಿಕ್ ಸಂಘಟನೆ ಪಿಎಫ್ಐ ನೆರವು ನೀಡಿದೆ. ನಕಲಿ ಸುದ್ದಿಗಳನ್ನು ಹರಡುವ ಮೂಲಕ ಕೆಲವರು ಜನರನ್ನು ಕೆರಳಿಸಿ ಪ್ರತಿಭಟನೆಯ ಕಾವನ್ನು ಇನ್ನಷ್ಟು ಏರಿಸಿದ್ದರು.
ಕೇರಳದ ಕಮ್ಯುನಿಸ್ಟ್ ಸರ್ಕಾರವೂ ಈ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ತೀವ್ರವಾಗಿ ಟೀಕಿಸುತ್ತಿದೆ ಮತ್ತು ರಾಜ್ಯದಲ್ಲಿ ಅದರ ಅನುಷ್ಠಾನವನ್ನು ಸ್ಥಗಿತಗೊಳಿಸುವುದಾಗಿ ಪ್ರತಿಜ್ಞೆ ಮಾಡಿದೆ. ಇದೇ ಕಾರಣಕ್ಕಾಗಿ ಅದು ಸುಪ್ರೀಂ ಮೆಟ್ಟಿಲನ್ನು ಕೂಡ ಏರಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.