ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿರುವ ನಡುವೆಯೇ, ಪೌರತ್ವಕ್ಕಾಗಿ ನೋಂದಣಿ ಮಾಡಿಕೊಳ್ಳಲು ಬಯಸುವ ನಿರಾಶ್ರಿತರಿಗೆ ಸಹಾಯ ಮಾಡುವ ಯೋಜನೆಯನ್ನು ಬಿಜೆಪಿ ರೂಪಿಸಿದೆ, ಅದರಲ್ಲೂ ವಿಶೇಷವಾಗಿ ವಿರೋಧ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಈ ಯೋಜನೆಯನ್ನು ಕಾರ್ಯಗತಗೊಳಿಸಲಿದೆ.
ಬಿಜೆಪಿ ಕಾರ್ಯಕರ್ತರು ಪೌರತ್ವಕ್ಕಾಗಿ ನೋಂದಣಿ ಮಾಡುವ ಪ್ರಕ್ರಿಯೆಯಲ್ಲಿ ನಿರಾಶ್ರಿತರಿಗೆ ಸಹಾಯ ಮಾಡುವ ಅಭಿಯಾನವನ್ನು ನಡೆಸುತ್ತಿದ್ದಾರೆ, ಇದರಿಂದಾಗಿ ಅವರು ನೋಂದಣಿ ಪ್ರಕ್ರಿಯೆಯನ್ನು ಸಮಸ್ಯೆ ಮುಕ್ತ ಮತ್ತು ತ್ವರಿತ ರೀತಿಯಲ್ಲಿ ನಡೆಸಲು ಸಾಧ್ಯವಾಗುತ್ತದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ತಮ್ಮ ಕ್ಷೇತ್ರಗಳಲ್ಲಿ ನೆಲೆಸಿರುವ ನಿರಾಶ್ರಿತರನ್ನು ಭೇಟಿ ಮಾಡಿ ಅವರ ಬಗ್ಗೆ ಮಾಹಿತಿ ಸಂಗ್ರಹಿಸುವಂತೆ ಬಿಜೆಪಿ ತನ್ನ ಸಂಸದರಿಗೆ ಸೂಚಿಸಿದೆ.
ದೇಶದ ವಿವಿಧ ಭಾಗಗಳಲ್ಲಿ ವಾಸಿಸುವ ನಿರಾಶ್ರಿತರ ದತ್ತಾಂಶವನ್ನು ಸಂಗ್ರಹಿಸುವುದು ಈ ಯೋಜನೆಯ ಹಿಂದಿನ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಅಭಿಯಾನವನ್ನು ಹೆಚ್ಚಾಗಿ ಪಶ್ಚಿಮ ಬಂಗಾಳ, ರಾಜಸ್ಥಾನ, ಕೇರಳ, ಪಂಜಾಬ್ ಮತ್ತು ಇತರ ವಿರೋಧ ಪಕ್ಷಗಳು ಆಳುವ ಪ್ರದೇಶಗಳಲ್ಲಿ ಹೆಚ್ಚಾಗಿ ನಡೆಸಲು ಬಿಜೆಪಿ ನಿರ್ಧರಿಸಿದೆ.
ನಿರಾಶ್ರಿತರನ್ನು ಗುರುತಿಸಿದ ನಂತರ, ಬಿಜೆಪಿ ಕಾರ್ಯಕರ್ತರು ಸರ್ಕಾರದಲ್ಲಿರುವ ಪಕ್ಷದ ಹಿರಿಯ ಮುಖಂಡರ ಸೂಚನೆಗೆ ಅನುಗುಣವಾಗಿ ಮತ್ತು ನಿರಾಶ್ರಿತರ ಬಗ್ಗೆ ಕೇಂದ್ರ ಹೊರಡಿಸಿದ ಮಾರ್ಗಸೂಚಿಗಳ ಪ್ರಕಾರ ಕೆಲಸ ಮಾಡಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.