ನವದೆಹಲಿ : ಸಿಎಎ ಮತ್ತು ಎನ್ಆರ್ಸಿ ವಿರುದ್ಧ ಪ್ರತಿಭಟನೆಯ ಹೆಸರಿನಲ್ಲಿ ಹಿಂಸಾಚಾರದಲ್ಲಿ ತೊಡಗಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ದೇಶದ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಕಾಪಾಡಬೇಕು ಎಂದು 154 ಪ್ರಜ್ಞಾವಂತ, ಜವಾಬ್ದಾರಿಯುತ ನಾಗರಿಕರು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಶುಕ್ರವಾರ ಒತ್ತಾಯಿಸಿದ್ದಾರೆ.
154 ಜನರ ಗುಂಪಿನಲ್ಲಿ ಉನ್ನತ ಸರ್ಕಾರಿ ಹುದ್ದೆ ಮತ್ತು ಸಾಂವಿಧಾನಿಕ ಹುದ್ದೆಗಳಿಂದ ನಿವೃತ್ತಿ ಪಡೆದವರು, ಬುದ್ಧಿಜೀವಿಗಳು ಸೇರಿದ್ದಾರೆ.
ಈ ಗುಂಪಿನ ನೇತೃತ್ವ ವಹಿಸಿದ ಕೇಂದ್ರ ಆಡಳಿತ ನ್ಯಾಯಮಂಡಳಿ (ಸಿಎಟಿ) ಅಧ್ಯಕ್ಷ ಮತ್ತು ಸಿಕ್ಕಿಂ ಹೈಕೋರ್ಟ್ನ ಮಾಜಿ ಮುಖ್ಯ ನ್ಯಾಯಮೂರ್ತಿ ಪೆರ್ಮೋಡ್ ಕೊಹ್ಲಿ ಅವರು, ಕೆಲವು ರಾಜಕೀಯ ಶಕ್ತಿಗಳು ಹಿಂಸಾತ್ಮಕ ಪ್ರತಿಭಟನಾಕಾರರಿಗೆ ಪ್ರಾಯೋಜಕತ್ವ ನೀಡುತ್ತಿದೆ ಮತ್ತು ಹಿಂಸೆ ಸೃಷ್ಟಿಯಾಗುತ್ತಿರುವುದಕ್ಕೆ ಕೆಲವೊಂದು ಬಾಹ್ಯ ಆಯಾಮವೂ ಇದೆ ಎಂದಿದ್ದಾರೆ.
ಕೆಟ್ಟ ವಾತಾವರಣವನ್ನು ಸೃಷ್ಟಿಸಲು ಕೆಲವು ಗುಂಪುಗಳು ದೇಶವನ್ನು ವಿಭಜಿಸುವ ಬಗ್ಗೆ ಮಾತನಾಡುತ್ತಿರುವುದಕ್ಕೆ ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ಸಾರ್ವಜನಿಕರಿಗೆ ಯಾವುದೇ ಅನಾನುಕೂಲತೆ ಆಗದಂತೆ ಪ್ರತಿಭಟನೆ ಶಾಂತಿಯುತವಾಗಿದ್ದರೆ ನಮಗೆ ಯಾವುದೇ ಆಕ್ಷೇಪವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ರಾಷ್ಟ್ರಪತಿಗೆ ಸಲ್ಲಿಸಿದ ಜ್ಞಾಪಕ ಪತ್ರಕ್ಕೆ ಸಹಿ ಹಾಕಿದವರಲ್ಲಿ 11 ಮಾಜಿ ಹೈಕೋರ್ಟ್ ನ್ಯಾಯಾಧೀಶರು, ಐಎಎಸ್, ಐಪಿಎಸ್, ಐಎಫ್ಎಸ್ ಅಧಿಕಾರಿಗಳು ಮತ್ತು ಭಾರತದ ಮಾಜಿ ರಾಯಭಾರಿಗಳು ಸೇರಿದಂತೆ 56 ಮಾಜಿ ಅಧಿಕಾರಿಗಳು, 56 ಮಾಜಿ ಉನ್ನತ ರಕ್ಷಣಾ ಅಧಿಕಾರಿಗಳು, ಬುದ್ಧಿಜೀವಿಗಳು, ಶಿಕ್ಷಣ ತಜ್ಞರು ಮತ್ತು ವೈದ್ಯಕೀಯ ವೃತ್ತಿಪರರು ಸೇರಿದ್ದಾರೆ.
“ಪ್ರಜ್ಞಾಪೂರ್ವಕ, ಜವಾಬ್ದಾರಿಯುತ ಮತ್ತು ಕಾಳಜಿಯುಕ್ತ ನಾಗರಿಕರು” ಎಂದು ಇವರು ತಮ್ಮನ್ನು ಉಲ್ಲೇಖಿಸಿದ್ದಾರೆ. ಈ ವಿಷಯವನ್ನು ಕೇಂದ್ರ ಗಂಭೀರತೆಯಿಂದ ನೋಡಬೇಕು ಮತ್ತು ದೇಶದ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ರಕ್ಷಿಸಬೇಕು ಮತ್ತು ಅಂತಹ ಶಕ್ತಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಜ್ಞಾಪಕ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.