ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು 71 ನೇ ಗಣರಾಜ್ಯೋತ್ಸವದ ಮುನ್ನಾ ದಿನವಾದ ಶನಿವಾರ ಸಂಜೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ.
ರಾಷ್ಟ್ರಪತಿಗಳ ಭಾಷಣ ಆಲ್ ಇಂಡಿಯಾ ರೇಡಿಯೊದ (ಎಐಆರ್)ದ ದೇಶವ್ಯಾಪಿ ಇರುವ ಎಲ್ಲಾ ನೆಟ್ವರ್ಕ್ಗಳಲ್ಲಿ ಸಂಜೆ 7 ಗಂಟೆಯಿಂದ ಪ್ರಸಾರವಾಗಲಿದೆ ಮತ್ತು ದೂರದರ್ಶನದ ಎಲ್ಲಾ ಚಾನೆಲ್ಗಳಲ್ಲಿ, ಮೊದಲು ಹಿಂದಿಯಲ್ಲಿ ಪ್ರಸಾರವಾಗಲಿದೆ ಮತ್ತು ನಂತರ ಇಂಗ್ಲಿಷ್ ಆವೃತ್ತಿಯನ್ನು ಪ್ರಸಾರ ಮಾಡಲಾಗುತ್ತದೆ.
ದೂರದರ್ಶನದ ಹಿಂದಿ ಮತ್ತು ಇಂಗ್ಲಿಷ್ ಭಾಷೆಯ ಪ್ರಸಾರವನ್ನು ಪ್ರಾದೇಶಿಕ ಭಾಷೆಗಳಲ್ಲಿ ದೂರದರ್ಶನದ ಪ್ರಾದೇಶಿಕ ಚಾನೆಲ್ಗಳು ಪ್ರಸಾರ ಮಾಡುತ್ತವೆ. ಆಕಾಶವಾಣಿಯು ಪ್ರಾದೇಶಿಕ ಭಾಷಾ ಆವೃತ್ತಿಗಳನ್ನು ರಾತ್ರಿ 9.30 ರಿಂದ ಆಯಾ ಪ್ರಾದೇಶಿಕ ನೆಟ್ವರ್ಕ್ಗಳಲ್ಲಿ ಪ್ರಸಾರ ಮಾಡಲಿದೆ.
ಪ್ರತಿವರ್ಷ ಗಣರಾಜ್ಯೋತ್ಸವದ ಮುನ್ನ ದಿನ ರಾಷ್ಟ್ರಪತಿಗಳು ರಾಷ್ಟ್ರವನ್ನುದ್ದೇಶಿಸಿ ಮಾತನಾಡುವ ಪದ್ಧತಿಯನ್ನು ಅಳವಡಿಸಿಕೊಂಡು ಬರಲಾಗಿದೆ. ಸರ್ಕಾರದ ಸಾಧನೆಗಳನ್ನು ವಿವರಿಸುವುದು, ದೇಶದಲ್ಲಿ ನಡೆಯುವ ಬೆಳವಣಿಗೆಗಳ ಬಗ್ಗೆ ಅಭಿಪ್ರಾಯಗಳನ್ನು ತಿಳಿಸುವುದು ಅವರ ಭಾಷಣದ ಮುಖ್ಯ ಉದ್ದೇಶ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.