ನವದೆಹಲಿ: ಕೇಂದ್ರ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಅನುಷ್ಠಾನಕ್ಕೆ ತಂದ ಬಳಿಕ ಬಾಂಗ್ಲಾದೇಶದ ಅಕ್ರಮ ವಲಸಿಗರು ತಮ್ಮ ದೇಶಕ್ಕೆ ಅಪಾರ ಸಂಖ್ಯೆಯಲ್ಲಿ ಪಲಾಯನ ಮಾಡುತ್ತಿದ್ದಾರೆ ಎಂಬುದಾಗಿ ಬಿಎಸ್ಎಫ್ ಹೇಳಿದೆ.
ಪೌರತ್ವ ತಿದ್ದುಪಡಿ ಕಾಯ್ದೆಯ ಜಾರಿಯಿಂದ ಅಕ್ರಮ ವಲಸಿಗರಲ್ಲಿ ಆತಂಕ ಮನೆ ಮಾಡಿದೆ, ತಾವಿಲ್ಲಿ ಸುರಕ್ಷಿತರಲ್ಲ ಎಂಬ ಭಾವನೆ ಅವರಿಗೆ ಬಂದಿದೆ. ಇದೇ ಕಾರಣಕ್ಕೆ ಗಂಟು ಮೂಟೆ ಕಟ್ಟಿಕೊಂಡು ಭಾರತವನ್ನು ತೊರೆಯುತ್ತಿದ್ದಾರೆ, ಬಾಂಗ್ಲಾದೇಶಕ್ಕೆ ವಾಪಾಸ್ಸಾಗುತ್ತಿದ್ದಾರೆ ಎಂದು ಹೇಳಲಾಗಿದೆ.
ಸಿಎಎ ಜಾರಿಯಿಂದ ಆತಂಕಗೊಂಡು ಅಕ್ರಮ ವಲಸಿಗರು ಅಪಾರ ಪ್ರಮಾಣದಲ್ಲಿ ಭಾರತವನ್ನು ತೊರೆಯುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ ಎಂಬುದಾಗಿ ಬಿಎಸ್ಎಫ್ ಅಧಿಕಾರಿಗಳು ಹೇಳಿದ್ದಾರೆ.
ಗಡಿ ದಾಟುತ್ತಿರುವ ಅಕ್ರಮ ವಲಸಿಗರ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ, ಜನವರಿ ತಿಂಗಳಿನಲ್ಲಿ ಇಲ್ಲಿಯವರೆಗೆ 268 ಅಕ್ರಮ ವಲಸಿಗರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಬಿಎಸ್ಎಫ್ ಐಜಿ (ದಕ್ಷಿಣ ಬಂಗಾಳ ಫ್ರಾಂಟಿಯರ್) ವೈ.ಬಿ ಖುರಾನಿಯಾ ಮಾಹಿತಿ ನೀಡಿದ್ದಾರೆ.
ಕೇಂದ್ರ ಸರ್ಕಾರವು ಬಾಂಗ್ಲಾದೇಶಿ ಅಕ್ರಮ ವಲಸಿಗರ ವಿರುದ್ಧ ಕಠಿಣ ನಿಲುವನ್ನು ಪ್ರದರ್ಶಿಸುತ್ತಿದೆ. ಈಗಾಗಲೇ ಜಾರಿಗೆ ತಂದಿರುವ ಸಿಎಎ ಇವರಲ್ಲಿ ಆತಂಕವನ್ನು ಮೂಡಿಸಿದೆ. ದೇಶವ್ಯಾಪಿಯಾಗಿ ಎನ್ ಆರ್ ಸಿ ಜಾರಿಗೊಂಡರೆ ತಮ್ಮ ಕಥೆ ಮುಗಿಯತ್ತದೆ ಎಂಬ ಭಯವೂ ಇವರಲ್ಲಿ ಮೂಡಿದೆ. ಈ ಕಾರಣಕ್ಕಾಗಿ ಇವರುಗಳು ಭಾರತದಿಂದ ಹೊರ ಹೋಗುವ ನಿರ್ಧಾರವನ್ನು ಮಾಡುತ್ತಿದ್ದಾರೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.