ಬೆಂಗಳೂರು: ಗಣರಾಜ್ಯೋತ್ಸವದ ಅಂಗವಾಗಿ, ಪೌರತ್ವ ತಿದ್ದುಪಡಿ ಕಾಯ್ದೆಗೆ ಬೆಂಬಲವನ್ನು ಸೂಚಿಸುವ ಸಲುವಾಗಿ ಕರ್ನಾಟಕ ಬಿಜೆಪಿಯು ‘ಸೆಲ್ಫಿ ವಿತ್ ತಿರಂಗಾ’ ಅಭಿಯಾನವನ್ನು ಆರಂಭಿಸಿದೆ. ತ್ರಿವರ್ಣ ಧ್ವಜದೊಂದಿಗೆ ಸೆಲ್ಫಿಯನ್ನು ಕ್ಲಿಕ್ಕಿಸಿ ಅದನ್ನು ಸಾಮಾಜಿಕ ಜಾಲತಾಣಗಳನ್ನು ಹಂಚಿಕೊಳ್ಳುವಂತೆ ತನ್ನ ಕಾರ್ಯಕರ್ತರಿಗೆ ಮತ್ತು ನಾಯಕರಿಗೆ ಕರೆಯನ್ನು ನೀಡಿದೆ.
ಪೌರತ್ವ ಕಾಯಿದೆ ಕುರಿತ ಜಾಗೃತಿ ಭಾಗವಾಗಿ ರಾಜ್ಯ ಬಿಜೆಪಿಯು ಜನವರಿ 26ರಂದು ಸೆಲ್ಫಿ ವಿತ್ ತಿರಂಗಾ ಅಭಿಯಾನ ಹಮ್ಮಿಕೊಂಡಿದೆ ಎಂದು ಮೂಲಗಳು ತಿಳಿಸಿವೆ
ಸಿಎಎ ಬಗ್ಗೆ ರಾಜ್ಯಾದ್ಯಂತ ಜಾಗೃತಿ ಕೈಗೊಳ್ಳಲಾಗುತ್ತಿದೆ. ಇದರ ಭಾಗವಾಗಿಯೇ ‘ಸೆಲ್ಫಿ ವಿತ್ ತಿರಂಗಾ’ ಅಭಿಯಾನವನ್ನು ಆಯೋಜನೆಗೊಳಿಸಲಾಗಿದೆ. ತಿರಂಗದೊಂದಿಗೆ ಸೆಲ್ಫಿ ಕ್ಲಿಕ್ಕಿಸಿ ಬಿಜೆಪಿ ನಾಯಕರು, ಕಾರ್ಯಕರ್ತರು ಸಿಎಎ ಪರವಾಗಿ ತಮ್ಮ ಬೆಂಬಲವನ್ನು ಸೂಚಿಸಲಿದ್ದಾರೆ.
ಇದರ ಅಂಗವಾಗಿ ಗಣರಾಜ್ಯೋತ್ಸವದ ದಿನ ಪ್ರತಿ ಬೂತ್ನಲ್ಲಿ ಧ್ವಜಾರೋಹಣ ಮಾಡಲಾಗುತ್ತದೆ ಮತ್ತು ‘ಉಟ್ಟ ಬಟ್ಟೆಯಲ್ಲಿ ಬಂದವರು’ ಪುಸ್ತಕ ವಿತರಿಸಲಾಗುತ್ತದೆ ಎನ್ನಲಾಗಿದೆ.
ಗಣರಾಜ್ಯೋತ್ಸವದ ದಿನ ತ್ರಿವರ್ಣ ಧ್ವಜದೊಂದಿಗೆ ತೆಗೆಸಿಕೊಂಡ ಚಿತ್ರವನ್ನು ಫೇಸ್ಬುಕ್, ಟ್ವಿಟರ್ ಇನ್ನಿತರ ಸಾಮಾಜಿಕ ಜಾಲತಾಣಗಳಲ್ಲಿ ಎಂಬ #SelfieWithTiranga ಹ್ಯಾಷ್ಟ್ಯಾಗ್ ನಡಿ ಹಂಚಿಕೊಳ್ಳಬೇಕು ಎಂದು ಬಿಜೆಪಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.