ನವದೆಹಲಿ : ಕೇಂದ್ರ ಸರ್ಕಾರ ದೇಶದ ನಾಗರಿಕ ಅತ್ಯುನ್ನತ ಪ್ರಶಸ್ತಿಯಾದ ಪದ್ಮ ಪುರಸ್ಕೃತರ ಪಟ್ಟಿ ಬಿಡುಗಡೆ ಮಾಡಿದೆ. ಒಟ್ಟು 141 ಜನರಲ್ಲಿ 7 ಮಂದಿಗೆ ಪದ್ಮವಿಭೂಷಣ, 16 ಜನರಿಗೆ ಪದ್ಮಭೂಷಣ ಹಾಗೂ 118 ಜನರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ.
ಸ್ವರ್ಗಸ್ಥರಾದ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಅವರಿಗೆ (ಮರಣೋತ್ತರ) ಪದ್ಮವಿಭೂಷಣ ಗೌರವ ನೀಡಲಾಗಿದೆ. ಕರ್ನಾಟಕದ 7 ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ.
ಕಿತ್ತಳೆ ಹಣ್ಣು ಮಾರಿ, ದಾನಿಗಳಿಂದ ಹಣ ಸಂಗ್ರಹಿಸಿ ಬಡ ಮಕ್ಕಳಿಗಾಗಿ ಶಾಲೆ ತೆರೆದು ಉಚಿತ ಶಿಕ್ಷಣ ನೀಡುವ ಮೂಲಕ ಅಕ್ಷರ ಸಂತ ಎಂದೇ ಖ್ಯಾತರಾಗಿರುವ ದಕ್ಷಿಣ ಕನ್ನಡದ ಹರೇಕಳ ಹಾಜಬ್ಬ, ಹಾಲಕ್ಕಿ ಸಮುದಾಯದ ತುಳಸಿ ಗೌಡ, ಮಾಜಿ ಹಾಕಿ ಆಟಗಾರ ಎಂ. ಪಿ. ಗಣೇಶ್, ಡಾ. ಗಂಗಾಧರ್, ಭರತ್ ಗೋಯೆಂಕಾ, ಕೆ.ವಿ. ಸಂಪತ್ ಕುಮಾರ್ ಮತ್ತು ವಿದುಷಿ ಜಯಲಕ್ಷ್ಮೀ ಕೆ. ಎಸ್., ವಿಜಯ್ ಸಂಕೇಶ್ವರ್ ಅವರಿಗೆ ಪದ್ಮಶ್ರೀ ದೊರೆತಿದೆ.
ಸ್ವರ್ಗಸ್ಥರಾದ ಅರುಣ್ ಜೇಟ್ಲಿ, ಸುಷ್ಮಾ ಸ್ಮರಾಜ್, ಜಾರ್ಜ್ ಫರ್ನಾಂಡೀಸ್ ಅವರಿಗೆ ಮರಣೋತ್ತರ ಪದ್ಮ ವಿಭೂಷಣ ಪ್ರಶಸ್ತಿ ಘೋಷಿಸಲಾಗಿದೆ.
ಪ್ರಶಸ್ತಿ ಪುರಸ್ಕೃತರ ಪಟ್ಟಿ
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.