ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು 71ನೇ ಗಣರಾಜ್ಯೋತ್ಸವದ ಅಂಗವಾಗಿ ಶನಿವಾರ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು.
ತಮ್ಮ ಭಾಷಣದ ವೇಳೆ ಅವರು, ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ದೇಶದ ಮೂರು ಅಂಗಗಳು ಇದ್ದಂತೆ ಆದರೆ ವಾಸ್ತವದಲ್ಲಿ ಜನರು ದೇಶವನ್ನು ರೂಪಿಸುತ್ತಾರೆ ಎಂದಿದ್ದಾರೆ.
ಸ್ವಚ್ಛ ಭಾರತ, ಉಜ್ವಲ ಭಾರತದಂತಹ ಹಲವಾರು ಯೋಜನೆಗಳನ್ನು ಜಾರಿಗೊಳಿಸಿರುವ ಕೇಂದ್ರ ಸರ್ಕಾರದ ಕಾರ್ಯವನ್ನು ಅವರು ಶ್ಲಾಘಿಸಿದರು.
ಇಸ್ರೋದ ಸಾಧನೆಗಳ ಬಗ್ಗೆ ಅವರು ಹೆಮ್ಮೆಯನ್ನು ವ್ಯಕ್ತಪಡಿಸಿದರು.
ಟೋಕಿಯೋ ಒಲಿಂಪಿಕ್ಸ್ನಲ್ಲಿ ಭಾರತೀಯ ಕ್ರೀಡಾಪಟುಗಳು ಅತ್ಯುತ್ತಮ ಸಾಧನೆಯನ್ನು ಪ್ರದರ್ಶಿಸಲಿದ್ದಾರೆ ಎಂಬ ಭರವಸೆಯನ್ನು ವ್ಯಕ್ತಪಡಿಸಿದರು.
ಒಲಿಂಪಿಕ್ಸ್ 2020ರಲ್ಲಿ ಭಾಗವಹಿಸುವ ಭಾರತದ ಎಲ್ಲಾ ಕ್ರೀಡಾಪಟುಗಳಿಗೂ ನಮ್ಮ ಶುಭಕಾಮನೆಗಳು, ಕೋಟ್ಯಂತರ ಭಾರತೀಯರ ಬೆಂಬಲ ಅವರಿಗೆ ಇದೆ ಎಂದರು.
ಆರೋಗ್ಯ ಮತ್ತು ಶಿಕ್ಷಣಕ್ಕೆ ಸುಲಭ ಪ್ರವೇಶವು ಉತ್ತಮ ಆಡಳಿತದ ಲಕ್ಷಣವಾಗಿದೆ. ಈ ಎರಡು ಕ್ಷೇತ್ರಗಳಲ್ಲೂ ಸರಕಾರ ಉತ್ತಮ ಸಾಧನೆಯನ್ನು ಮಾಡಿ ಸಾಕಷ್ಟು ಮುಂದೆ ನಡೆದಿದೆ ಎಂದಿದ್ದಾರೆ.
ಏಕ ಭಾರತ ಏಕ ಮಾರುಕಟ್ಟೆ ಆಶೋತ್ತರಗಳನ್ನು ಸರಕು ಮತ್ತು ಸೇವಾ ತೆರಿಗೆ ಪೂರೈಸಿದೆ ಎಂದು ಅವರು ಹೇಳಿದ್ದಾರೆ.
ಅತ್ಯಂತ ಕಡಿಮೆ ಅವಧಿಯಲ್ಲಿ ಸ್ವಚ್ಛ ಭಾರತ ಅಭಿಯಾನ ಮಹತ್ವದ ಸಾಧನೆಯನ್ನು ಮಾಡಿದೆ ಎಂದು ಅವರು ಹೇಳಿದ್ದಾರೆ.
ದೇಶದ ಅಭಿವೃದ್ಧಿಗೆ ಬಲಿಷ್ಠ ಆಂತರಿಕ ಭದ್ರತೆ ಅತ್ಯಂತ ಪ್ರಮುಖವಾಗಿರುತ್ತದೆ. ಕೇಂದ್ರ ಸರಕಾರವು ಆಂತರಿಕ ಭದ್ರತಾ ವ್ಯವಸ್ಥೆಯನ್ನು ಬಲಪಡಿಸುವುದಕ್ಕಾಗಿ ಹಲವಾರು ಕ್ರಮಗಳನ್ನು ಕೈಗೊಂಡಿದೆ ಎಂದಿದ್ದಾರೆ.
ನಮ್ಮ ಯುವಜನತೆಗೆ ದೇಶ ಯಾವಾಗಲೂ ಮೊದಲು. ಅವರಿಂದಾಗಿ ನಾವು ಎಂದೂ ನವಭಾರತವನ್ನು ಸಾಕ್ಷೀಕರಿಸುತ್ತಿದ್ದೇವೆ ಎಂದಿದ್ದಾರೆ.
ರಾಷ್ಟ್ರಪತಿಗಳ ಭಾಷಣ ಶನಿವಾರ ಏಳುಗಂಟೆಗೆ ಪ್ರಸಾರವಾಗಿದ್ದು, ಆಲ್ ಇಂಡಿಯಾ ರೇಡಿಯೋದ ಎಲ್ಲಾ ಪ್ರಾದೇಶಿಕ ನೆಟ್ವರ್ಕ್ಗಳಲ್ಲಿ ಪ್ರಸಾರಗೊಂಡಿವೆ. ದೂರದರ್ಶನದಲ್ಲೂ ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಪ್ರಸಾರವಾಗಿದೆ. ಬಳಿಕ ಇದರ ಭಾಷಾಂತರಗಳು ವಿವಿಧ ಪ್ರಾದೇಶಿಕ ಭಾಷೆಗಳಲ್ಲಿ ಪ್ರಸಾರಗೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.