ನವದೆಹಲಿ: ಡಿಸೆಂಬರ್ನಲ್ಲಿ ಭಾರತೀಯ ಸಂಸತ್ತು ಅಂಗೀಕರಿಸಿದ ಪೌರತ್ವ ತಿದ್ದುಪಡಿ ಕಾಯ್ದೆ ಸಂಪೂರ್ಣ ಆಂತರಿಕ ವಿಷಯವಾಗಿದೆ. ಸರಿಯಾದ ಪ್ರಕ್ರಿಯೆಯನ್ನು ಅನುಸರಿಸಿ ಮತ್ತು ಪ್ರಜಾಪ್ರಭುತ್ವದ ವಿಧಾನಗಳ ಮೂಲಕ ಅನುಷ್ಠಾನಕ್ಕೆ ಬಂದ ಕಾಯ್ದೆ ಇದಾಗಿದೆ ಎಂದು ಭಾರತ ಹೇಳಿದೆ.
ಯುರೋಪಿಯನ್ ಯೂನಿಯನ್ ಸಂಸತ್ತಿನಲ್ಲಿ ಸಿಎಎ ವಿರುದ್ಧ ನಿರ್ಣಯ ಅಂಗೀಕರಿಸಲು ಮುಂದಾಗಿರುವುದನ್ನು ವಿರೋಧಿಸಿ ಭಾರತ ಈ ಹೇಳಿಕೆಯನ್ನು ನೀಡಿದೆ.
“ನೈಸರ್ಗಿಕೀಕರಣದ ಹಾದಿಯನ್ನು ರೂಪಿಸುವ ಪ್ರತಿಯೊಂದು ಸಮಾಜವು ಒಂದು ಸಂದರ್ಭ ಮತ್ತು ಮಾನದಂಡಗಳನ್ನು ಆಲೋಚಿಸುತ್ತದೆ. ಇದು ತಾರತಮ್ಯವಲ್ಲ. ಅಸಲಿಗೆ, ಯುರೋಪಿಯನ್ ಸಮಾಜಗಳು ಇದೇ ವಿಧಾನವನ್ನು ಅನುಸರಿಸಿವೆ “ಎಂಬುದಾಗಿ ಬೆಳವಣಿಗೆಯ ಬಗ್ಗೆ ತಿಳಿದುಕೊಂಡಿರುವ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದರು.
ಮುಂದಿನ ವಾರ ಸಿಎಎ ಕುರಿತು ಕರಡು ನಿರ್ಣಯವನ್ನು ತರಲು ಯುರೋಪಿಯನ್ ಯೂನಿಯನ್ ಸಂಸತ್ತಿನ ಕೆಲವು ಸದಸ್ಯರು ಪ್ರಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಈ ಅಭಿಪ್ರಾಯಗಳು ಬಂದಿವೆ.
“ಸಿಎಎ ಸಂಪೂರ್ಣವಾಗಿ ಭಾರತಕ್ಕೆ ಆಂತರಿಕ ವಿಷಯವಾಗಿದೆ. ಇದಲ್ಲದೆ, ಸಂಸತ್ತಿನ ಉಭಯ ಸದನಗಳಲ್ಲಿ ಸಾರ್ವಜನಿಕ ಚರ್ಚೆಯ ನಂತರ ಈ ಶಾಸನವನ್ನು ಸರಿಯಾದ ಪ್ರಕ್ರಿಯೆಯಿಂದ ಮತ್ತು ಪ್ರಜಾಪ್ರಭುತ್ವದ ವಿಧಾನಗಳ ಮೂಲಕ ಅಂಗೀಕರಿಸಲಾಗಿದೆ” ಎಂದು ಹೇಳಿದ್ದಾರೆ.
ಅಫ್ಘಾನಿಸ್ಥಾನ, ಬಾಂಗ್ಲಾದೇಶ ಮತ್ತು ಪಾಕಿಸ್ಥಾನ ಎಂಬ ಮೂರು ದೇಶಗಳಲ್ಲಿ ಧಾರ್ಮಿಕ ಕಿರುಕುಳಕ್ಕೊಳಗಾದ ಹಿಂದೂಗಳು, ಸಿಖ್ಖರು, ಕ್ರಿಶ್ಚಿಯನ್ನರು, ಬೌದ್ಧರು, ಜೈನರು ಮತ್ತು ಪಾರ್ಸಿಗಳಿಗೆ ಭಾರತೀಯ ಪೌರತ್ವವನ್ನು ತ್ವರಿತಗೊಳಿಸುವ ಉದ್ದೇಶದಿಂದ ಸಿಎಎಯನ್ನು ತರಲಾಗಿದೆ. ಆದರೆ ಕೆಲವರು ಇದಕ್ಕೆ ಮುಸ್ಲಿಂ ವಿರೋಧಿ ಎಂಬ ಪಟ್ಟವನ್ನು ಕಟ್ಟಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.