ನವದೆಹಲಿ: ಬೋಡೋ ಬುಡಕಟ್ಟಿನ ಜನರಿಗೆ ರಾಜಕೀಯ ಮತ್ತು ಆರ್ಥಿಕ ಹಕ್ಕುಗಳನ್ನು ಖಾತರಿಪಡಿಸುವ ಮೂಲಕ ಕೇಂದ್ರ ಸರ್ಕಾರವು ಸೋಮವಾರ, ನಿಷೇಧಿತ ಸಂಘಟನೆಯಾದ ನ್ಯಾಷನಲ್ ಡೆಮಾಕ್ರಟಿಕ್ ಫ್ರಾಂಟ್ ಆಫ್ ಬೋಡೋಲ್ಯಾಂಡ್ (ಎನ್ಡಿಎಫ್ಬಿ)ನ ಎಲ್ಲಾ ಬಣಗಳ ಪ್ರತಿನಿಧಿಗಳೊಂದಿಗೆ ತ್ರಿಪಕ್ಷೀಯ ಒಪ್ಪಂದಕ್ಕೆ ಸಹಿ ಹಾಕಿದೆ.
ಒಪ್ಪಂದದ ಪ್ರಕಾರ, ಬೋಡೋ ಪ್ರದೇಶವನ್ನು ಈಗ ಬೋಡೋಲ್ಯಾಂಡ್ ಟೆರಿಟೋರಿಯಲ್ ರೀಜನ್ (ಬಿಟಿಆರ್) ಎಂದು ಹೆಸರಿಸಲಾಗುತ್ತದೆ, ಈ ಮೂಲಕ ಈ ಪ್ರದೇಶ ಹೆಚ್ಚಿನ ಆಡಳಿತಾತ್ಮಕ ಅಧಿಕಾರವನ್ನು ಗಳಿಸಲಿದೆ ಎಂದು ಈಶಾನ್ಯ ನೌ ವರದಿಯಲ್ಲಿ ತಿಳಿಸಿದೆ. ಇದಲ್ಲದೆ, ಪ್ರದೇಶದ ಸಮಗ್ರ ಅಭಿವೃದ್ಧಿಗೆ ಕೇಂದ್ರವು 900 ಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜ್ ಅನ್ನು ಮಂಜೂರು ಮಾಡಿದೆ.
ಶಾಂತಿ ಒಪ್ಪಂದಕ್ಕೆ ಸಹಿ ಮಾಡುವುದನ್ನು ಒಂದು ಪ್ರಮುಖ ಒಪ್ಪಂದ ಎಂದು ಕರೆದ ಕೇಂದ್ರ ಗೃಹ ಸಚಿವರು, “ಇಂದು ಕೇಂದ್ರ, ಅಸ್ಸಾಂ ಸರ್ಕಾರ ಮತ್ತು ಬೋಡೋ ಪ್ರತಿನಿಧಿಗಳು ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಈ ಒಪ್ಪಂದವು ಅಸ್ಸಾಂ ಮತ್ತು ಬೋಡೋ ಜನರಿಗೆ ಸುವರ್ಣ ಭವಿಷ್ಯವನ್ನು ಖಚಿತಪಡಿಸುತ್ತದೆ.” ಎಂದಿದ್ದಾರೆ.
1970 ರ ದಶಕದ ಆರಂಭದಲ್ಲಿ ಪ್ರಾರಂಭವಾದ ಮತ್ತು ನಂತರ ಶಸ್ತ್ರಸಜ್ಜಿತವಾದ ಈ ಆಂದೋಲನವು ರಾಜ್ಯಾದ್ಯಂತ 4000 ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ ಎಂದು ಅವರು ಹೇಳಿದ್ದಾರೆ
ಗುರುವಾರ ಎನ್ಡಿಎಫ್ಬಿಯ ಬಣಗಳ 1,550 ಕಾರ್ಯಕರ್ತರು 130 ಶಸ್ತ್ರಾಸ್ತ್ರಗಳನ್ನು ಕೆಳಗಿಟ್ಟು ಸರ್ಕಾರಕ್ಕೆ ಶರಣಾಗಿದ್ದಾರೆ, ಈ ಮೂಲಕ ಸಶಸ್ತ್ರ ದಂಗೆಯನ್ನು ತ್ಯಜಿಸಿ ಸಮಾಜದ ಮುಖ್ಯವಾಹಿನಿಗೆ ಮರಳಿದ್ದಾರೆ ಎಂದು ಗೃಹ ಸಚಿವರು ತಿಳಿಸಿದ್ದಾರೆ. “ಗೃಹ ಸಚಿವರಾಗಿ, ಎಲ್ಲಾ ಭರವಸೆಗಳನ್ನು ಸಮಯಕ್ಕೆ ಅನುಗುಣವಾಗಿ ಪೂರೈಸಲಾಗುವುದು ಎಂದು ನಾನು ಎಲ್ಲ ಪ್ರತಿನಿಧಿಗಳಿಗೆ ಭರವಸೆ ನೀಡಲು ಬಯಸುತ್ತೇನೆ” ಎಂದು ಅವರು ಶರಣಾರ್ಥಿಗಳಿಗೆ ಸ್ಪಷ್ಟಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.