ನವದೆಹಲಿ: ಪುಲ್ವಾಮಾದ ಅವಂತಿಪೋರಾದಲ್ಲಿ ನಡೆದ ಎನ್ಕೌಂಟರ್ನಲ್ಲಿ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಕಮಾಂಡರ್ ಖಾರಿ ಯಾಸಿರ್ ಸೇರಿದಂತೆ ಮೂವರು ಭಯೋತ್ಪಾದಕರು ಹತರಾದ ಎರಡು ದಿನಗಳ ನಂತರ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಬಾರಾಮುಲ್ಲಾ ಜಿಲ್ಲೆಯಲ್ಲಿ ಮತ್ತೊಬ್ಬ ಭಯೋತ್ಪಾದಕನನ್ನು ಬಂಧಿಸಿದ್ದಾರೆ.
19 ವರ್ಷದ ಸಾಜಿದ್ ಫಾರೂಕ್ ದಾರ್ನನ್ನು ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಲಷ್ಕರ್-ಎ-ತೊಯ್ಬಾದೊಂದಿಗೆ ಸಂಬಂಧ ಹೊಂದಿದ್ದಾನೆಂದು ಹೇಳಲಾಗಿದೆ, ಈತನನ್ನು ಮಂಗಳವಾರ ಮುಂಜಾನೆ ಬಾರಾಮುಲ್ಲಾದ ಆಂಡರ್ಗಮ್ ಪಟ್ಟನ್ ಪ್ರದೇಶದಿಂದ ಬಂಧಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರ ಈ ವರದಿಯನ್ನು ದೃಢಪಡಿಸಿದ್ದು, ಟ್ವಿಟ್ಟರ್ನಲ್ಲಿ, “ಪೊಲೀಸರು ನಡೆಸಿದ ಮತ್ತೊಂದು ಕಾರ್ಯಾಚರಣೆಯಲ್ಲಿ 19 ವರ್ಷದ ಸಾಜಿದ್ ಫಾರೂಕ್ ದಾರ್ನನ್ನು ಬಂಧಿಸಲಾಗಿದೆ. ಎಲ್ಇಟಿಯೊಂದಿಗೆ ಸಂಬಂಧ ಹೊಂದಿರುವ ಈತನನ್ನು ಆಂಡರ್ಗಮ್ ಪಟ್ಟನ್ ಬಾರಾಮುಲ್ಲಾದಿಂದ ಬಂಧಿಸಲಾಗಿದೆ” ಎಂದಿದೆ.
ಇದಕ್ಕೂ ಮುನ್ನ ಜನವರಿ 27 ರಂದು ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಅರ್ವಾನಿ ಗ್ರಾಮದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವರದಿಗಳ ಪ್ರಕಾರ, ಭದ್ರತಾ ಪಡೆಗಳು ಎಷ್ಟು ಪ್ರಯತ್ನಿಸಿದರೂ ಕೂಡ ಸ್ಥಳೀಯ ಉಗ್ರ ಶರಣಾಗಲು ನಿರಾಕರಿಸಿದ್ದಾನೆ. ಈ ಸಂದರ್ಭ ನಡೆದ ಗುಂಡಿನ ದಾಳಿಯಲ್ಲಿ ಸೇನೆಯ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ, ಈ ಕಾರ್ಯಾಚರಣೆ ಉಗ್ರನ ಹತ್ಯೆಯೊಂದಿಗೆ ಕೊನೆಗೊಂಡಿದೆ. ಶವವನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದ್ದು, ಹತ್ಯೆಗೀಡಾದ ಉಗ್ರನನ್ನು ಕುಲ್ಗಂನ ಶಾಹಿದ್ ಖಾರ್ ಎಂದು ಗುರುತಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.