ಚಾಮರಾಜನಗರ: ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಬಾಲಿವುಡ್ನ ಆಕ್ಷನ್ ಹೀರೋ ಅಕ್ಷಯ್ ಕುಮಾರ್ ಅವರು ವನ್ಯ ಜೀವಿ ಸಂರಕ್ಷಣೆ ಬಗ್ಗೆ ಸಂದೇಶ ಸಾರುವ ಸಾಕ್ಷ್ಯಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬಂಡೀಪುರದ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಇವರುಗಳ ಶೂಟಿಂಗ್ ಕಾರ್ಯಕ್ರಮ ನಡೆಯಲಿದೆ. ಬ್ರಿಟನ್ನಿನ ಪ್ರಸಿದ್ಧ ಸಾಹಸಿ ಬೇರ್ ಗ್ರಿಲ್ಸ್ ಈ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.
ರಜನಿಕಾಂತ್ ಒಂದು ದಿನ ಹಾಗೂ ಅಕ್ಷಯ್ ಕುಮಾರ್ ಮೂರು ದಿನಗಳ ಕಾಲ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ಹುಲಿ ಸಂರಕ್ಷಿತ ಪ್ರದೇಶದಲ್ಲಿ ವಿಹಾರ ನಡೆಸಲಿದ್ದಾರೆ. ವನ್ಯ ಜೀವಿ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಡಾಕ್ಯುಮೆಂಟರಿಯನ್ನು ಸಿದ್ಧಪಡಿಸಲಾಗುತ್ತಿದೆ.
ಈಗಾಗಲೇ ಬಂಡೀಪುರಕ್ಕೆ ರಜನಿಕಾಂತ್ ಆಗಮಿಸಿದ್ದಾರೆ. ಅಕ್ಷಯ್ ಕುಮಾರ್ ಇನ್ನು ಆಗಮಿಸಬೇಕಾಗಿದೆ. ಅವರು ಬಂದ ನಂತರ ಮೂರು ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ ಎನ್ನಲಾಗಿದೆ.
ಮುಂಬಯಿನ ಬೆನಿಜಾಯ್ ಏಶಿಯಾ ಗ್ರೂಪ್ ಸೆವೆನ್ಸ್ಟಾರ್ ಟಾರಸ್ ಈ ಸಾಕ್ಷ್ಯಚಿತ್ರ ನಿರ್ಮಾಣ ಮಾಡುತ್ತಿದೆ. ಈಗಾಗಲೇ ಬಂಡೀಪುರದಲ್ಲಿ ಚಿತ್ರೀಕರಣದ ಸಿದ್ಧತೆ ಪೂರ್ಣಗೊಂಡಿದೆ. ಗುಂಡ್ಲುಪೇಟೆ ಹೊರಭಾಗದಲ್ಲಿ ಹೆಲಿಪ್ಯಾಡ್ ಸಹ ನಿರ್ಮಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮೂರು ದಿನಗಳ ಕಾಲ ನಡೆಯುವ ಶೂಟಿಂಗ್ಗಾಗಿ 17 ಷರತ್ತುಗಳನ್ನು ವಿಧಿಸಲಾಗಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
ಶಬ್ದಮಾಲಿನ್ಯ, ವಾಯುಮಾಲಿನ್ಯ, ಬೆಂಕಿ ಅನಾಹುತ ನಡೆಯದಂತೆ ನೋಡಿಕೊಳ್ಳುವ ಷರತ್ತು ವಿಧಿಸಿ ಶೂಟಿಂಗ್ಗೆ ಅನುಮತಿಯನ್ನು ನೀಡಲಾಗಿದೆ. ಜನವರಿ 27 ರಿಂದ ಜನವರಿ 29 ರವರೆಗೆ ಶೂಟಿಂಗ್ ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.